ಮಂಜೂಷಾ ವಸ್ತು ಸಂಗ್ರಹಾಲಯ (ಸಂಗ್ರಹ ಚಿತ್ರ) 
ರಾಜ್ಯ

ಧರ್ಮಸ್ಥಳ: ನವೀಕೃತ ಮಂಜೂಷಾ ವಸ್ತು ಸಂಗ್ರಹಾಲಯ ಉದ್ಘಾಟಿಸಲಿರುವ ಸಿಎಂ ಕುಮಾರಸ್ವಾಮಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗಡೆಯವರ ಕನಸಿನ ಕೂಸಾಗಿರುವ ಮಂಜೂಷಾ ...

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗಡೆಯವರ ಕನಸಿನ ಕೂಸಾಗಿರುವ ಮಂಜೂಷಾ ವಸ್ತುಸಂಗ್ರಹಾಲಯದ ನವೀಕೃತ ಕಟ್ಟಡವನ್ನು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಬುಧವಾರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ವಸ್ತುಸಂಗ್ರಹಾಲಯವನ್ನು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು 1.25 ಲಕ್ಷ ಚದರಡಿ ವಿಸ್ತೀರ್ಣವನ್ನು ಹೊಂದಿದೆ. ಅದರಲ್ಲಿ ಸುಮಾರು 26 ಸಾವಿರ ಪುರಾತನ ವಸ್ತುಗಳಿವೆ. ಇವೆಲ್ಲವೂ ಹೆಗ್ಗಡೆಯವರ ಸಂಗ್ರಹಗಳಾಗಿವೆ. ವಸ್ತು ಸಂಗ್ರಹಾಲಯದಲ್ಲಿ ಐದನೇ ಶತಮಾನದ ಹಸ್ತಪ್ರತಿಗಳು, ಪ್ರಾಚೀನ ಶಿಲಾಯುಗದ ಮತ್ತು ನವಶಿಲಾಯುಗದ ಬಂಡೆಗಳು, 1500ರ ದಶಕದ ಧಾರ್ಮಿಕ ಕಲಾಕೃತಿಗಳು (ಮೂಲ ದೇವಾಲಯದ ರಥ ಸೇರಿದಂತೆ) ಮತ್ತು ಕಳೆದ ಶತಮಾನದ ಕ್ಯಾಮೆರಾಗಳು ಕೂಡ ಇವೆ. ಕರಾವಳಿ ಭಾಗದ ಇತ್ತೀಚಿನ ಐತಿಹಾಸಿಕ ಕಲಾಕೃತಿಗಳು ಕೂಡ ಸೇರಿವೆ.

ಈ ಬಗ್ಗೆ ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಡಾ ಡಿ ವೀರೇಂದ್ರ ಹೆಗ್ಗಡೆ, ಇಂದಿನ ಬಳಕೆ ಮತ್ತು ಬಿಸಾಕುವ ಸಂಸ್ಕೃತಿಯ ಮಧ್ಯೆ ಭಾರತ ಹಾಗೂ ವಿದೇಶಗಳ ಐತಿಹಾಸಿಕ ಮತ್ತು ಸಾಂಸ್ಕೃತಿಕ ಕಲಾವಸ್ತುಗಳ ಸಂಗ್ರಹ ಮುಂದಿನ ಪೀಳಿಗೆಗೆ ಅತ್ಯಮೂಲ್ಯವಾಗಿದೆ ಎಂದರು.

ನವೆಂಬರ್ 2ನೇ ವಾರದಿಂದ ವರ್ಷವಿಡೀ ಎಲ್ಲಾ ದಿನಗಳು ಈ ಸಂಗ್ರಹಾಲಯ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಪ್ರವೇಶ ಶುಲ್ಕ 10 ರೂಪಾಯಿಗಳಾಗಿವೆ.12 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT