ವೀರಮಹಾದೇವಿ ಪಾತ್ರದಲ್ಲಿ ಸನ್ನಿ ಲಿಯೋನ್, ಕನ್ನಡಪರ ಸಂಘಟನೆಗಳ ಪ್ರತಿಭಟನೆ 
ರಾಜ್ಯ

'ವೀರಮಹಾದೇವಿ' ಸನ್ನಿ ಲಿಯೋನ್ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ನಟಿ ಸನ್ನಿ ಲಿಯೋನ್ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದೆ. ನಗರದಲ್ಲಿ ...

ಬೆಂಗಳೂರು: ನಟಿ ಸನ್ನಿ ಲಿಯೋನ್ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದೆ. ನಗರದಲ್ಲಿ ನವೆಂಬರ್ 3ರಂದು ಆಯೋಜಿಸಲಾಗಿರುವ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾಗಿ ಕನ್ನಡಪರ ಸಂಘಟನೆಗಳ ಬಣ ಹೇಳಿದೆ.

ಬಹುಭಾಷೆಯ ಚಿತ್ರದಲ್ಲಿ ವೀರಮಹಾದೇವಿ ಪಾತ್ರವನ್ನು ಸನ್ನಿ ಲಿಯೋನ್ ನಿರ್ವಹಿಸುತ್ತಿರುವುದು ಕನ್ನಡಪರ ಸಂಘಟನೆಗಳ ವಿರೋಧಕ್ಕೆ ಮುಖ್ಯ ಕಾರಣವಾಗಿದೆ.

ಈ ಕುರಿತು ನಿನ್ನೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಕೆ ಹರೀಶ್, ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ, ಆದರೆ ಐತಿಹಾಸಿಕ ಮಹತ್ವದ ಪಾತ್ರವಾದ ವೀರಮಹಾದೇವಿ ಪಾತ್ರವನ್ನು ಆಕೆ ನಿರ್ವಹಿಸುತ್ತಿರುವುದಕ್ಕೆ ನಮ್ಮ ವಿರೋಧವಾಗಿದೆ. ವೀರಮಹಾದೇವಿ ಕನ್ನಡಿಗರ ಪಾಲಿಗೆ ಮಾತೆಯಾಗಿದ್ದು ಅವರ ಪಾತ್ರವನ್ನು ಮಾಜಿ ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಮಾಡುತ್ತಿರುವುದು ವೀರಮಹಾದೇವಿಗೆ ಮಾಡುತ್ತಿರುವ ಅವಮಾನ ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್, ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಪೊಲೀಸರು ಷರತ್ತಿನ ಒಪ್ಪಿಗೆ ನೀಡಿದ್ದಾರೆ ಎಂದರು. ಈ ತಿಂಗಳ ಆರಂಭದಲ್ಲಿ ನಗರದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸನ್ನಿ ಲಿಯೋನ್ ಪೋಸ್ಟರ್ ನ್ನು ದಹಿಸಿದ್ದರು.

ಕಳೆದ ವರ್ಷ ಡಿಸೆಂಬರ್ 31ರಂದು ಹೊಸ ವರ್ಷಾಚರಣೆಗೆ ಟೈಮ್ ಕ್ರಿಯೇಷನ್ಸ್ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮವನ್ನು ವ್ಯಾಪಕ ಪ್ರತಿಭಟನೆ ಹಿನ್ನಲೆಯಲ್ಲಿ ಅಂತಿಮ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT