ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕಕ್ಕೆ ಈಶಾನ್ಯ ಮಾರುತ ಪ್ರವೇಶ ವಿಳಂಬ

ನೈರುತ್ಯ ಮುಂಗಾರು ಮಳೆ ಕೊರತೆ ಅನುಭವಿಸಿದ್ದ ಕರ್ನಾಟಕ ರಾಜ್ಯ ಇದೀಗ ಈಶಾನ್ಯ ಮುಂಗಾರು ...

ಬೆಂಗಳೂರು: ನೈರುತ್ಯ ಮುಂಗಾರು ಮಳೆ ಕೊರತೆ ಅನುಭವಿಸಿದ್ದ ಕರ್ನಾಟಕ ರಾಜ್ಯ ಇದೀಗ ಈಶಾನ್ಯ ಮುಂಗಾರು ವಿಳಂಬ ಎದುರಿಸುತ್ತಿದೆ. ಪ್ರತಿವರ್ಷ ಈ ಸಮಯಕ್ಕೆ ಈಶಾನ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸುತ್ತದೆ. ಆದರೆ ಅಕ್ಟೋಬರ್ ಮೂರನೇ ವಾರವಾದರೂ ಈಶಾನ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿಲ್ಲ. ಈ ವರ್ಷ ನೈರುತ್ಯ ಮುಂಗಾರು ಅಕ್ಟೋಬರ್ 21ರ ವೇಳೆಗೆ ರಾಜ್ಯವನ್ನು ನಿರ್ಗಮಿಸಿದೆ, ಈ ಹೊತ್ತಿಗೆ ಈಶಾನ್ಯ ಮಾರುತ ಪ್ರವೇಶವಾಗಬೇಕಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಮುಂಗಾರು ರಾಜ್ಯದಲ್ಲಿ 839 ಮಿಲಿ ಮೀಟರ್ ನಷ್ಟು ಸುರಿಯಬೇಕಾಗಿತ್ತು. ಆದರೆ ರಾಜ್ಯದಲ್ಲಿ ಸುರಿದಿದ್ದು 804 ಮಿಲಿ ಮೀಟರ್. ಉತ್ತರ ಒಳನಾಡು ಭಾಗಗಳಾದ ಬಳ್ಳಾರಿ, ಹಾವೇರಿ, ಗದಗ, ಬೆಳಗಾವಿ, ಧಾರವಾಡ, ಕೊಪ್ಪಳ, ವಿಜಯಪುರ, ಬೀದರ್ ಮತ್ತು ಕಲಬುರಗಿಗಳಲ್ಲಿ ಜೂನ್ 1ರಿಂದ ಸೆಪ್ಟೆಂಬರ್ ವರೆಗೆ ನೈರುತ್ಯ ಮುಂಗಾರು 804 ಮಿಲಿ ಮೀಟರ್ ನಷ್ಟು ಸುರಿದಿದೆ. ಅಕ್ಟೋಬರ್ ನಲ್ಲಿ ಇನ್ನೂ ಕಡಿಮೆಯಾಗಿದ್ದು ರಾಜ್ಯದಲ್ಲಿ ವಾಡಿಕೆಯ 113 ಮಿಲಿ ಮೀಟರ್ ಗಿಂತ 76 ಮಿಲಿ ಮೀಟರ್ ನಷ್ಟು ಮಳೆ ಸುರಿದಿದೆ.

ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಎಸ್ ಎಸ್ ಎಂ ಗಾವಸ್ಕರ್, ಈಶಾನ್ಯ ಮಾರುತ ಆಗಮನದಲ್ಲಿ ಸ್ವಲ್ಪ ತಡವಾಗುತ್ತಿದೆ. ನಾಳೆ ತಮಿಳುನಾಡು ಪ್ರವೇಶಿಸಲಿದೆ. ಕರ್ನಾಟಕದಲ್ಲಿ ಶನಿವಾರ ಅಥವಾ ಭಾನುವಾರ ಸುರಿಯಲಿದೆ ಎನ್ನುತ್ತಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಪ್ರೊ ಎಂ ಬಿ ರಾಜೇಗೌಡ, ಈಶಾನ್ಯ ಮಾರುತದ ಆಗಮನದ ವಿಳಂಬದಿಂದ ಬೆಳಗಳಿಗೆ ಸೂಕ್ತ ಕಾಲಕ್ಕೆ ನೀರು ಸಿಗದೆ ರೈತರಿಗೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT