ಜಿ ಪರಮೇಶ್ವರ 
ರಾಜ್ಯ

2 ದಿನದಲ್ಲಿ ಬೆಂಗಳೂರು ಗುಂಡಿ ಮುಕ್ತವಾಗಬೇಕು: ಬಿಬಿಎಂಪಿಗೆ ಡಿಸಿಎಂ ಆದೇಶ

ಎರಡು ದಿನಗಳಲ್ಲಿ ಬೆಂಗಳೂರು ನಗರವನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ....

ಬೆಂಗಳೂರು: ಎರಡು ದಿನಗಳಲ್ಲಿ ಬೆಂಗಳೂರು ನಗರವನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಗುರುವಾರ ಬಿಬಿಎಂಪಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. 
ಇಂದು ವಿಕಾಸಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ,  ಬಿಬಿಎಂಪಿ ಆಡಳಿತದ ಬಗ್ಗೆ ಹೈಕೋರ್ಟ್‌ ನ್ಯಾಯಾದೀಶರು ಲೋಪದೋಷವನ್ನು ಎತ್ತಿಹಿಡಿದು, ಕಟುವಾಗಿ ಸೂಚನೆ ನೀಡಿದ್ದಾರೆ‌. ಗುಂಡಿ ಮುಚ್ಚಲು ಗಡುವು ನೀಡಿದ್ದು, ಈ ಕುರಿತ ಅರ್ಜಿ ಶನಿವಾರ ಮತ್ತೆ ಚಾರಣೆಗೆ ಬರಲಿದೆ. ಅಷ್ಟರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಂಟು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಎಲ್ಲ ಮಾಹಿತಿಗಳನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿಯು ಪ್ರಕಟಿಸಬೇಕು. ನಗರದ ಪ್ರತಿ ಬೀದಿಯ ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ ಹಾಕಲಾಗುತ್ತದೆ. ಇದೇ ದಾಖಲೆಯನ್ನು ಹೈಕೋರ್ಟ್‌ಗೂ ಸಲ್ಲಿಸಲಾಗುವುದು.‌ ಈ ದಾಖಲೆ ತಪ್ತಪ್ಪಿದ್ದರೆ ಆಯಾ ವಲಯ ಜಂಟಿ ಆಯುಕ್ತರಿಗೆ ನೇರ ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಹೇಳಿದ್ದಾರೆ. 
ಕಳೆದ ಎರಡು ವರ್ಷಗಳಿಂದ ಟೆಂಡರ್‌ ಶ್ಯೂರ್ ಹಾಗೂ ವೈಟ್‌ಟಾಪಿಂಗ್ ಯೋಜನೆ ಪ್ರಗತಿಯಲ್ಲಿದ್ದು, ಈ ಎರಡು ಯೋಜನೆಗಳು ಈ ವರ್ಷದ ಬೇಸಿಗೆಯ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. 100 ಕಿ.ಮೀ. ನಷ್ಟು ರಸ್ತೆಗೆ ವೈಟ್‌ಟ್ಯಾಪಿಂಗ್‌ ಮಾಡಲು ಯೋಜಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT