ಸಂಗ್ರಹ ಚಿತ್ರ 
ರಾಜ್ಯ

ವೈದ್ಯೆಗೆ ಜೀವ ಬೆದರಿಕೆ: ಗಿರಿನಗರ ಠಾಣೆ ಪೊಲೀಸ್ ಅಮಾನತು

ದಂತ ವೈದ್ಯೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಗಿರಿನಗರ ಠಾಣೆ ಪೇದೆಯೊಬ್ಬರನ್ನು ಬುಧವಾರ ಅಮಾನತು ಮಾಡಲಾಗಿದೆ...

ಬೆಂಗಳೂರು: ದಂತ ವೈದ್ಯೆಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಗಿರಿನಗರ ಠಾಣೆ ಪೇದೆಯೊಬ್ಬರನ್ನು ಬುಧವಾರ ಅಮಾನತು ಮಾಡಲಾಗಿದೆ. 
ಗಿರಿನಗರ ಠಾಣೆ ಪೇದೆ ಸುದರ್ಶನ್ ಮಿಸ್ಕಿಯವರನ್ನು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ಅಮಾನತುಗೊಳಿಸಿದ್ದಾರೆ. 
ತನ್ನೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಹೋದರೆ ಗುಂಡಿಟ್ಟು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ದಂತ ವೈದ್ಯೆ ಪೇದೆ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
ಈ ಬಗ್ಗೆ ತನಿಖೆ ವಿಚಾರಣೆ ಹಂತದಲ್ಲಿದೆ. ದೂರು ದಾಖಲಾಗಿರುವ ಹಿನ್ನಲೆಯಲ್ಲಿ ಮಿಸ್ಕಿಯವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಚಿಕಿತ್ಸೆಗೆಂದು ಆಗಾಗ ಪೇದೆ ಮಾತನಾಡುತ್ತಿದ್ದರು. ಇದಾದ ಕೆಲ ದಿನಗಳ ಬಳಿಕ ಸುಖಾಸುಮ್ಮನೆ ಕರೆ ಮಾಡಿ, ಕೆಟ್ಟದಾಗಿ ಮಾತನಾಡಲು ಆರಂಭಿಸಿದ್ದರು. ಇದಾದ ಬಳಿಕ ಅವರ ಕರೆ ಸ್ವೀಕರಿಸುವುದನ್ನು ನಿಯಂತ್ರಿಸಿದಾಗ ಬೆದರಿಕೆ ಹಾಕಲು ಆರಂಭಿಸಿದ್ದರು. ಕಿರುಕುಳದಿಂದಾಗಿ ಕ್ಲಿನಿಕ್'ನ್ನೇ ಸ್ಥಳಾಂತರ ಮಾಡಿದ್ದೆ. ಇದಾದ ಬಳಿಕ ಹೊಸ ಕ್ಲಿನಿಕ್'ಗೂ ಬರಲೂ ಆರಂಭಿಸಿದ್ದ. ಆತನೊಂದಿಗೆ ಸಲುಗೆಯಿಂದ ನಡೆದುಕೊಳ್ಳದೇ ಹೋದರೆ ಗುಂಡಿಟ್ಟು ಕೊಲ್ಲುವುದಾಗಿ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದ ಎಂದು ವೈದ್ಯೆ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT