ಶಶಿಕಲಾ 
ರಾಜ್ಯ

ಬೆಂಗಳೂರು: ಜೈಲಿನಲ್ಲೇ ಕನ್ನಡ ಕೋರ್ಸ್ ಕಲಿಯಲು ಮುಂದಾದ ಶಶಿಕಲಾ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿ.ಕೆ. ಶಶಿಕಲಾ ಅವರು ಕನ್ನಡದಲ್ಲಿ ಸರ್ಟಿಫಿಕೇಟ್‌ ಕೋರ್ಸ್‌ ಮಾಡಲು ಉತ್ಸುಕತೆ ತೋರಿದ್ದಾರೆ. ದೂರ ಶಿಕ್ಷಣ ...

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿ.ಕೆ. ಶಶಿಕಲಾ ಅವರು ಕನ್ನಡದಲ್ಲಿ ಸರ್ಟಿಫಿಕೇಟ್‌ ಕೋರ್ಸ್‌ ಮಾಡಲು ಉತ್ಸುಕತೆ ತೋರಿದ್ದಾರೆ. ದೂರ ಶಿಕ್ಷಣ ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ನೋಂದಣಿ ಮಾಡಲು ಜೈಲಿನಲ್ಲಿರುವ ಕೈದಿಗಳನ್ನು ಉತ್ತೇಜಿಸಲು ನಿರ್ದೇಶನಾಲಯದ ಅಧಿಕಾರಿಗಳು ಜೈಲಿಗೆ ತೆರಳಿದ್ದಾಗ ಈ ವಿಷಯ ತಿಳಿದು ಶಶಿಕಲಾ ಕೂಡ ಕೋರ್ಸ್‌ ಮಾಡಲು ಆಸಕ್ತಿ ವಹಿಸಿದರು ಎಂದು ತಿಳಿದು ಬಂದಿದೆ. 
ಜೈಲು ಸೇರಿದಾಗ ಶಶಿಕಲಾ ಅವರಿಗೆ ಕನ್ನಡದ ಬಗ್ಗೆ ಅಷ್ಟೇನೂ ಗೊತ್ತಿರಲಿಲ್ಲ. ಇದೀಗ ಅವರು ಕೆಲ ಕನ್ನಡದ ಪದಗಳನ್ನು ಬಳಸುತ್ತಾರೆ. ವಾಕ್ಯ ರಚನೆ ಮಾಡುತ್ತಾರೆ. ಕನ್ನಡದಲ್ಲಿ ಸಮರ್ಥವಾಗಿ ಮಾತನಾಡುತ್ತಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳು ನಿರ್ದೇಶನಾಲಯದ ನಿರ್ದೇಶಕ ಪ್ರೊ.ಬಿ.ಸಿ. ಮೈಲಾರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.  
ಶಶಿಕಲಾ ಅವರು ಕೋರ್ಸ್‌ ಮಾಡಲು ಆಸಕ್ತಿ ತೋರಿದಲ್ಲಿ ಶನಿವಾರ ನಾವೇ ಜೈಲಿಗೆ ಭೇಟಿ ನೀಡಿ ಪ್ರವೇಶ ಪಡೆಯುತ್ತೇವೆ. ಕೋರ್ಸ್‌ನ ಬಗ್ಗೆ ವಿವರಿಸುತ್ತೇವೆ. ಹಾಗೆಯೇ, ಅರ್ಜಿ ನಮೂನೆ ಮೇಲೆ ಸಹಿ ಪಡೆಯುವ ಮೂಲಕ ನೋಂದಣಿ ಪ್ರಕ್ರಿಯೆ ಮುಗಿಸುತ್ತೇವೆ'' ಎಂದು ಬೆಂಗಳೂರು ವಿವಿ ದೂರ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 
'ಪರಪ್ಪನ ಅಗ್ರಹಾರ ಜೈಲಿನಲ್ಲೇ ಬೆಂಗಳೂರು ವಿವಿ ದೂರಶಿಕ್ಷಣ ನಿರ್ದೇಶನಾಲಯ ತರಗತಿಗಳನ್ನು ನಡೆಸಲಿದೆ. ಜೈಲಿಗೆ ತೆರಳಲಿರುವ ಅಧ್ಯಾಪಕರೇ ಶಶಿಕಲಾ ಅವರಿಗೂ ತರಗತಿ ತೆಗೆದುಕೊಳ್ಳಲಿದ್ದಾರೆ,''ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಕೇಂದ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 257 ಕೈದಿಗಳು 2018-19ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಸೇರಿದಂತೆ ನಾನಾ ರೀತಿಯ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ಮಾಡಲು ಆಸಕ್ತಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT