ರಾಜ್ಯ

ಗೌರಿ ಲಂಕೇಶ್ ಹತ್ಯೆ ಆರೋಪಿಯಿಂದ ಖಾಲಿ ಪತ್ರಗಳಿಗೆ ಬಲವಂತದಿಂದ ಸಹಿ : ಎಸ್ ಐಟಿ ನಿರಾಕರಣೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ 17 ಆರೋಪಿ ವಾಸುದೇವ್ ಸೂರ್ಯವಂಶಿ ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದು, ಎಸ್ ಐಟಿ ಅಧಿಕಾರಿಗಳು ಬಲವಂತದಿಂದ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾನೆ.

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ 17 ಆರೋಪಿ   ವಾಸುದೇವ್ ಸೂರ್ಯವಂಶಿ  ಪೊಲೀಸ್ ಕಸ್ಟಡಿ ಅವಧಿ ನಿನ್ನೆಗೆ ಮುಕ್ತಾಯಗೊಂಡಿದ್ದು,  ಎಸ್ ಐಟಿ ಅಧಿಕಾರಿಗಳು ಬಲವಂತದಿಂದ ಅನೇಕ ಕಾಗದ ಪತ್ರಗಳಿಗೆ  ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾನೆ.

ಕೋಕಾ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಧೀಶರ ಮುಂದೆ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದಾಗ ಆತ ಒಪ್ಪಿಕೊಳ್ಳದಿದ್ದರೂ ಬಲವಂತದಿಂದ ಅನೇಕ ಖಾಲಿ ಪತ್ರಗಳಿಗೆ ಸಹಿ ಹಾಕಿಸಿಕೊಳ್ಳಲಾಗಿದೆ ಎಂದು  ವಾಸುದೇವ್ ಸೂರ್ಯವಂಶಿ ಆರೋಪಿಸಿದ್ದಾನೆ.

ಈ ಸಂಬಂಧ ಆತನ ಪರ ವಕೀಲ ನಾಗೇಶ್ ಜೋಷಿ , ವಿಶೇಷ ನ್ಯಾಯಾಲಕ್ಕೆ ದೂರು ಸಲ್ಲಿಸಿದ್ದು, ಪೊಲೀಸರು ಸೇರಿದಂತೆ ಯಾರಿಗೂ ಆತ ತಪ್ಪೊಪ್ಪಿಗೆ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

 ಕೆಲ ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಕೆಲ ಅಧಿಕಾರಿಗಳು ಆರೋಪಿಯಿಂದ ಖಾಲಿ ಪತ್ರಗಳಿಗೆ ಸಹಿ ಪಡೆದುಕೊಂಡಿದ್ದಾರೆ. ಆತ ಓದಲೂ ಕೂಡಾ ಅವಕಾಶ ನೀಡದೆ ಸಹಿ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

 ಆದರೆ, ಈ ಆರೋಪ ದುರುದ್ದೇಶ ಹಾಗೂ ಸಂಪೂರ್ಣ ಸುಳ್ಳಿನಿಂದ ಕೂಡಿದೆ ಎಂದು ಎಸ್ ಐಟಿ ಹೇಳಿದೆ. ಆರೋಪಿಯಿಂದ ತಪ್ಪೊಪ್ಪಿಕೆ ಹೇಳಿಕೆ ಪಡೆದ ನಂತರ ಎಸ್ ಪಿ ಮಟ್ಟದ ಅಧಿಕಾರಿಗಳು  ಕೂಡಲೇ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಎಸ್ ಪಿಗಳು ಎಸ್ ಐಟಿಯ ಭಾಗವಾಗಿರುವುದಿಲ್ಲ . ಆರೋಪಿ ಇಂತಹ ಯಾವುದೇ ಆರೋಪ ಮಾಡಿಲ್ಲ ಎಂದು ಎಸ್ ಐಟಿ ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ ನಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರುಪಡಿಸಿದಾಗ  ಸಹಿ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ. ನ್ಯಾಯಾಲಯ ಆತನನ್ನು ನ್ಯಾಯಾಲಯ ಕಸ್ಟಡಿಗೆ ಒಪ್ಪಿಸಿದೆ.

ಈ ನಡುವೆ  ಗೌರಿ ಹತ್ಯೆ ಪ್ರಕರಣದ ಏಳನೇ ಆರೋಪಿ ಮೋಹನ್ ನಾಯಕ್  ಸಲ್ಲಿಸಿದ ಜಾಮೀನು ಅರ್ಜಿಯನ್ನು  ನ್ಯಾಯಾಲಯ ತಿರಸ್ಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT