ಮಹೇಶ್ 
ರಾಜ್ಯ

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂತೆಂದು ನೇಣಿಗೆ ಶರಣಾದ ಆಟೋ ಚಾಲಕ!

ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.
ಗೂಳಿಪುರ ನಿವಾಸಿ ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ (26) ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಎರಡು ವರ್ಷದ ಹಿಂದೆ ನಡೆದ ಅಪಘಾತವೊಂದರ ಸಂಬಂಧ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಾಲಯದಿಂದ ನೋಟೀಸ್ ಬಂದಿತ್ತು ಎನ್ನಲಾಗಿದ್ದು ನೋಟೀಸ್ ನೋಡಿ ಗಾಬರಿಯಾಗಿದ್ದ ಮಹೇಶ್ "ತಾನು ಜೈಲಿಗೆ ಹೋದರೇನು ಗತಿ!" ಎಂದು ಭಯದಿಂದ ನೇಣಿಗೆ ಶರಣಾಗಿದ್ದಾನೆ.
ಭಾನುವಾರ ಮನೆಯಲ್ಲಿ ಊಟ್ ಮಾದಿ ಹೊರ ಹೋಗಿದ್ದ ಮಹೇಶ್ ಗ್ರಾಮದ ಹೊರಗಿದ್ದ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೋಮವಾರ ಬೆಳಿಗ್ಗೆ ವರೆಗೆ ಮಹೇಸ್ ಮನೆಗೆ ವಾಪಾಸಾಗದ್ದನ್ನು ಕಂಡ ಕುಟುಂಬದವರು ಅವನ ಹುಡುಕಾಟದಲ್ಲಿದ್ದಾಗ ಮರಕ್ಕೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ.
ಘಟನೆ ಸಂಬಂಧ ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT