ಸಾವನ್ನಪ್ಪಿದ ಚಿರತೆ 
ರಾಜ್ಯ

ಮೈಸೂರು: ಮೃಗಾಲಯದಲ್ಲಿ ಹಾವಿನ ಜೊತೆ ಕಾದಾಡಿ ಪ್ರಾಣ ಕಳೆದುಕೊಂಡ ಚಿರತೆ

ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಭಾನುವಾರ ಮಧ್ಯಾಹ್ನ ಚಿರತೆ (ಜಾಗ್ವಾರ್‌) ಮತ್ತು ನಾಗರಹಾವಿನ ನಡುವೆ ನಡೆದ ಕಾಳಗದಲ್ಲಿ ಚಿರತೆ ...

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಭಾನುವಾರ ಮಧ್ಯಾಹ್ನ ಚಿರತೆ (ಜಾಗ್ವಾರ್‌) ಮತ್ತು ನಾಗರಹಾವಿನ ನಡುವೆ ನಡೆದ ಕಾಳಗದಲ್ಲಿ ಚಿರತೆ ಸಾವನ್ನಪ್ಪಿದೆ.
ಎಂದಿನಂತೆ ವೀಕೆಂಡ್‌ ಸವಿಯಲು ಪ್ರವಾಸಿಗರು ಭಾನುವಾರ ಮೃಗಾಲಯಕ್ಕೆ ಆಗಮಿಸಿದ್ದರು. ಆದರೆ ಇದ್ದಕ್ಕಿದ್ದಂತೆ ಜಾಗ್ವಾರ್‌ ಇದ್ದ ಆವರಣಕ್ಕೆ ನಾಗರಹಾವೊಂದು ಪ್ರವೇಶಿಸಿದೆ. ಅಲ್ಲದೆ, ಬುಸುಗುಟ್ಟಿದೆ. ಇದರಿಂದ ಕೋಪಗೊಂಡ ಜಾಗ್ವಾರ್‌ ನಾಗರಹಾವಿನ ಮೇಲೆ ದಾಳಿ ಮಾಡಿದೆ. 
ನಾಗರಹಾವು ಅಲ್ಲಿಯೇ ಸುತ್ತಾಡುತ್ತಿದ್ದ ರಾಜು ಹೆಸರಿನ 14 ವರ್ಷದ ಚಿರತೆಯನ್ನು ಕಂಡು ಹೆಡೆಎತ್ತಿ ಬುಸುಗುಟ್ಟಿದೆ. ಸಹಜವಾಗಿ ಗಾಬರಿಗೊಂಡ ಚಿರತೆ ನಾಗರಹಾವಿನ ಮೇಲೆ ಎರಗಿದೆ. ಇದರಿಂದ ಪ್ರತಿ ದಾಳಿ ನಡೆಸಿದ ಹಾವು ಹಲವು ಸಲ ಚಿರತೆಯನ್ನು ಕಚ್ಚಿದೆ. 
ಸಮೀಪದಲ್ಲಿಯೇ ಇದ್ದ ಮೃಗಾಲಯದ ಸಿಬ್ಬಂದಿ ಕಾದಾಟದ ವಿಷಯವನ್ನು ಮೃಗಾಲಯದ ಮೇಲಾಧಿಕಾರಿಗಳು ಹಾಗೂ ಪಶುವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಬಂದ ಅಧಿಕಾರಿಗಳು ಜಾಗ್ವಾರ್‌ ರಾಜುನನ್ನು ಜಗಳದಿಂದ ಬಿಡಿಸಿ ಬೋನ್‌ನೊಳಕ್ಕೆ ಸೇರಿಸಿದ್ದಾರೆ.
 ಹಲವಾರು ಬಾರಿ ಹಾವು ಕಚ್ಚಿದ್ದರಿಂದ ವಿಷ ಜಾಗ್ವಾರ್‌ ದೇಹಕ್ಕೆ ಸೇರಿರುವುದನ್ನು ಗಮನಿಸಿದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಈ ನಡುವೆ ಚಿರತೆ ದಾಳಿಗೊಳಗಾದ ನಾಗರಹಾವು ಸ್ಥಳದಲ್ಲೇ ಸತ್ತಿದೆ. ಮೃಗಾಲಯದಲ್ಲಿರುವ ಪಶು ಆಸ್ಪತ್ರೆಯಲ್ಲಿ ತೀವ್ರ ನಿತ್ರಾಣಗೊಂಡಿದ್ದ ರಾಜು(ಜಾಗ್ವಾರ್‌)ವಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಎರಡು ಗಂಟೆಯ ಬಳಿಕ ಮೃತಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT