ಕೆ.ಎಸ್. ಈಶ್ವರಪ್ಪ 
ರಾಜ್ಯ

ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪಗೆ ಜಾಮೀನು ರಹಿತ ವಾರಂಟ್!

ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಪದೇ ಪದೇ ಗೈರಾಗಿರುವ ಶಾಸಕ, ಬಿಜೆಪಿ ಮ್ಮುಖಂಡ ಕೆ.ಎಸ್. ಈಶ್ವರಪ್ಪ....

ಬೆಂಗಳೂರು: ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಪದೇ ಪದೇ ಗೈರಾಗಿರುವ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೆ ಆದೇಶಿಸಿದೆ.
ಬೆಂಗಳೂರು ವಿಚಾರಣಾಧೀನ ನ್ಯಾಯಾಲಯ ವಾರಂಟ್ ಜಾರಿಗಾಗಿ ಆದೇಶಿಸಿದ್ದು ಸಿಟಿ ಸಿವಿಲ್ ಕೋರ್ಟ್ ವಿಶೇಷ ನ್ಯಾಯಾಲಯದಿಂದ ಈ ಆದೇಶ ಬಂದಿದೆ.
ಈಶ್ವರಪ್ಪ ಮುಂದಿನ ನವೆಂಬರ್ 24ಕ್ಕೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಕೋರ್ಟ್ ಹೇಳಿದೆ.
2011ರ ಸಮಯ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದ ವೇಳೆ ಈಶ್ವರಪ್ಪ ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಧರ್ಮಪಾಲ್ ಖಾಸಗಿ ದೂರು ದಾಖಲಿಸಿದ್ದರು.ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಈಶ್ವರಪ್ಪ ಅವರಿಗೆ ವಾರಂಟ್ ಜಾರಿಗೊಳಿಸಲು ಹೇಳಿ ಅವರು ವಿಚಾರಣೆಗೆ ಹಾಜರಾಗುವುದನ್ನು ಕಡ್ಡಾಯ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT