ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು 
ರಾಜ್ಯ

ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು

ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ...

ಬೆಂಗಳೂರು: ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ. 
ಹೆಬ್ಬಾಳದ ಕೆಂಪಾಪುರ ನಿವಾಸಿ ಸಚಿನ್ (20) ಮೃತ ವಿದ್ಯಾರ್ಥಿ. ಘಟನೆಯಲ್ಲಿ ಇಂಡಿಕಾ ಕಾರು ಚಾಲಕ ಅಪ್ಸರ್ (32) ಹಾಗೂ ಲಕ್ಷ್ಮೀ ವರದರಾಜ್ (61) ಎಂಬುವವರು ಗಾಯಗೊಂಡಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪರಡೆಯುತ್ತಿದ್ದಾರೆ. 
ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್, ನಿನ್ನೆ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಮಧ್ಯಾಹ್ನ 1.50ರ ಸುಮಾರಿಗೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಕೊಡಿಗೇಹಳ್ಳಿ ಸಮೀಪ ವೇಗವಾಗಿ ಕಾರು ಚಾಲನೆ ಮಾಡಿದ್ದಾನೆ. 
ಈ ವೇಳೆ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರನ್ನು ಹಿಂದಿಕ್ಕುವ ಭರದಲ್ಲಿ ಇನ್ನೋವಾ ಕಾರಿಗೆ ಡಿಕ್ಕಿಯಾಗಿ ಬಳಿಕ ಆಲ್ಟೋ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಚಿನ್, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ, 
ಲಕ್ಷ್ಮೀ ವರದರಾಜ್ ಅವರು ಮೂಲತಃ ತೆಲಂಗಾಣ ರಾಜ್ಯದವರಾಗಿದ್ದು, ಜಯನಗರದಲ್ಲಿನ ಸಂಬಂಧಿಕೊಬ್ಬರ ಮನೆಗೆ ಬಂದಿದ್ದರು. ವಾಪಸ್ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೋಗುವಾಗ ದುರ್ಘಟನೆ ನಡೆದಿದೆ. 
ಸಚಿನ್ ಚಾಲನೆ ಮಾಡುತ್ತಿದ್ದ ಆಲ್ಟೋ ಕಾರಿನಲ್ಲಿ ದಾಖಲೆಗಳು ಪತ್ತೆಯಾಗಿಲ್ಲ. ಇನ್ನಷ್ಟೇ ಅವುಗಳನ್ನು ಪತ್ತೆ ಹಚ್ಚಬೇಕಿದೆ. ಅತಿ ವೇಗದಿಂದ ಚಾಲನೆ ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಇದ್ದಾರೆ. ಪ್ರಕರಣ ಸಂಬಂಧ ಹೆಬ್ಬಾಳ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT