ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ)ಯ ಪ್ರೊಫೆಸರ್ ಗಿರಿಧರ್ ಮದ್ರಾಸ್ 
ರಾಜ್ಯ

ಮೀ ಟೂ ಆರೋಪ: ಐಐಎಸ್'ಸಿ ವಿಜ್ಞಾನಿ ಪ್ರೊ.ಗಿರಿಧರ್'ಗೆ ಕಡ್ಡಾಯ ನಿವೃತ್ತಿ!

ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಭಾರತೀಯ ಪತ್ರಿಕೋದ್ಯಮದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದ ಮೀಟು ಇದೀಗ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೂ ವ್ಯಾಪಿಸಿದೆ...

ಬೆಂಗಳೂರು: ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಭಾರತೀಯ ಪತ್ರಿಕೋದ್ಯಮದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದ ಮೀಟು ಇದೀಗ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೂ ವ್ಯಾಪಿಸಿದೆ. 
ಕಳೆದ ತಿಂಗಳಷ್ಟೇ ಡಾಕ್ಟರೇಟ್ ವಿದ್ಯಾರ್ಥಿಯೊಬ್ಬರಿಂದ ಮೀ ಟೂ ಆರೋಪಕ್ಕೆ ಗುರಿಯಾಗಿದ್ದ ಹಲವು ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ವಿಜ್ಞಾನಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ)ಯ ಪ್ರೊಫೆಸರ್ ಗಿರಿಧರ್ ಮದ್ರಾಸ್ ಅವರಿಗೆ ಕಡ್ಡಾಯ ನಿವೃತ್ತಿ ಮೇಲೆ ಕಳುಹಿಸಲಾಗಿದೆ. 
ಈ ಸಂಬಂಧ ಐಐಎಸ್'ಸಿಯ ಕೌನ್ಸಿಲ್ ತನಿಖೆ ಬಳಿಕ ಪ್ರೊ.ಮದ್ರಾಸ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. 
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಐಐಎಸ್'ಸಿ ನಿರ್ದೇಶಕ ಪ್ರೊ.ಅನುರಾಗ್ ಕುಮಾರ್, ಪ್ರೊ. ಮದ್ರಾಸ್ ಅವರು, ಕಡ್ಡಾಯ ನಿವೃತ್ತಿ ಪಡೆಯಬೇಕು ಎಂಬ ನಿರ್ಧಾರವನ್ನು ಕೌನ್ಸಿಲ್ ಕೈಗೊಂಡಿದೆ ಎಂದು ಹೇಳಿದ್ದಾರೆ. ಆದರೆ, ನಿವೃತ್ತಿಯ ಲಾಭಗಳನ್ನು ಮದ್ರಾಸ್ ಅವರು ಪಡೆಯಲಿದ್ದಾರೆಯೇ ಅಥವಾ ಇಲ್ಲ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 
ಪ್ರೊ. ಗಿರಿಧರ್ ಮದ್ರಾಸ್ ಅವರು ಶಾಂತಿ ಸ್ವರೂಪ ಭಟ್ನಾಗರ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜರನಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT