ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ)ಯ ಪ್ರೊಫೆಸರ್ ಗಿರಿಧರ್ ಮದ್ರಾಸ್ 
ರಾಜ್ಯ

ಮೀ ಟೂ ಆರೋಪ: ಐಐಎಸ್'ಸಿ ವಿಜ್ಞಾನಿ ಪ್ರೊ.ಗಿರಿಧರ್'ಗೆ ಕಡ್ಡಾಯ ನಿವೃತ್ತಿ!

ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಭಾರತೀಯ ಪತ್ರಿಕೋದ್ಯಮದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದ ಮೀಟು ಇದೀಗ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೂ ವ್ಯಾಪಿಸಿದೆ...

ಬೆಂಗಳೂರು: ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಭಾರತೀಯ ಪತ್ರಿಕೋದ್ಯಮದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದ ಮೀಟು ಇದೀಗ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೂ ವ್ಯಾಪಿಸಿದೆ. 
ಕಳೆದ ತಿಂಗಳಷ್ಟೇ ಡಾಕ್ಟರೇಟ್ ವಿದ್ಯಾರ್ಥಿಯೊಬ್ಬರಿಂದ ಮೀ ಟೂ ಆರೋಪಕ್ಕೆ ಗುರಿಯಾಗಿದ್ದ ಹಲವು ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ವಿಜ್ಞಾನಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್'ಸಿ)ಯ ಪ್ರೊಫೆಸರ್ ಗಿರಿಧರ್ ಮದ್ರಾಸ್ ಅವರಿಗೆ ಕಡ್ಡಾಯ ನಿವೃತ್ತಿ ಮೇಲೆ ಕಳುಹಿಸಲಾಗಿದೆ. 
ಈ ಸಂಬಂಧ ಐಐಎಸ್'ಸಿಯ ಕೌನ್ಸಿಲ್ ತನಿಖೆ ಬಳಿಕ ಪ್ರೊ.ಮದ್ರಾಸ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. 
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಐಐಎಸ್'ಸಿ ನಿರ್ದೇಶಕ ಪ್ರೊ.ಅನುರಾಗ್ ಕುಮಾರ್, ಪ್ರೊ. ಮದ್ರಾಸ್ ಅವರು, ಕಡ್ಡಾಯ ನಿವೃತ್ತಿ ಪಡೆಯಬೇಕು ಎಂಬ ನಿರ್ಧಾರವನ್ನು ಕೌನ್ಸಿಲ್ ಕೈಗೊಂಡಿದೆ ಎಂದು ಹೇಳಿದ್ದಾರೆ. ಆದರೆ, ನಿವೃತ್ತಿಯ ಲಾಭಗಳನ್ನು ಮದ್ರಾಸ್ ಅವರು ಪಡೆಯಲಿದ್ದಾರೆಯೇ ಅಥವಾ ಇಲ್ಲ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 
ಪ್ರೊ. ಗಿರಿಧರ್ ಮದ್ರಾಸ್ ಅವರು ಶಾಂತಿ ಸ್ವರೂಪ ಭಟ್ನಾಗರ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜರನಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT