ವಿದ್ಯುತ್ ಕಂಬ ಏರಿದ ಮಹಿಳಾ ಕಾರ್ಪೋರೇಟರ್ 
ರಾಜ್ಯ

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ನಿರ್ಲಕ್ಷ್ಯ: ವಿದ್ಯುತ್ ಕಂಬ ಏರಿದ ಬೆಳಗಾವಿ ಮಹಿಳಾ ಕಾರ್ಪೋರೇಟರ್!

ತಮ್ಮ ವಾರ್ಡ್ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಮಹಿಳಾ ಕಾರ್ಪೋರೇಟರ್ ಒಬ್ಬರು ವಿದ್ಯುತ್ ಕಂಬ ಏರಿದ ಘಟನೆ...

ಬೆಳಗಾವಿ: ತಮ್ಮ ವಾರ್ಡ್ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಮಹಿಳಾ ಕಾರ್ಪೋರೇಟರ್ ಒಬ್ಬರು ವಿದ್ಯುತ್ ಕಂಬ ಏರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ 41ನೇ ವಾರ್ಡ್ ಸದಸ್ಯೆ ಸರಳಾ ಹೆರೇಕರ್ , ಬೆಳಗಾವಿ ನಗರ ಕಾರ್ಪೋರೇಷನ್ ಮೇಲೆ ಒತ್ತಡ ಹಾಕಲು  ವಿದ್ಯುತ್ ಕಂಬ ಏರಿದ್ದು ಬಿಸಿಸಿಗೆ ಮುಜುಗರ ಉಂಟು ಮಾಡಿತ್ತು.
ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಪೊಲೀಸರು ಸರಳಾ ಅವರು ವಿದ್ಯುತ್ ಕಂಬ ಏರಿರುವ ವಿಷಯದ ಬಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಎಪಿಎಂಸಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಕಾರಣ ವಿಚಾರಿಸಿದರು. ಬೆಳಗಾವಿ ಕಾರ್ಪೋರೇಷನ್ ತಮ್ಮ ವಾರ್ಡ್ ಅನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ. 
ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಅಡಿಯಲ್ಲಿ ಸರ್ಕಾರದ ಹಲವು ಯೋಜನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ಬೃಹತ್ ಮಟ್ಟದ ಅನುದಾನ ಬಿಡುಗಡೆ ಮಾಡಬೇಕಿದೆ, ಆದರೆ ಕಾರ್ಪೋರೇಷನ್ ಅಧಿಕಾರಿಗಳು  ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಾವು ವಿದ್ಯುತ್ ಕಂಬದಿಂದ ಕೆಳಗಿಳಿಯಬೇಕಾದರೆ ತಮ್ಮ ಷರತ್ತನ್ನು ಪೂರೈಸಬೇಕು. ಬಿಸಿಸಿ ಆಯುಕ್ತ ಶಶಿಧರ್ ಕುರೆರ್ ಸ್ಥಳಕ್ಕಾಗಮಿಸಿ ಅಭಿವೃದ್ಧಿ ಕಾರ್ಯಗಳಿಗೆ  ಕೂಡಲೇ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರ್ ಮಾತ್ರ ತಾವು ಕಂಬ ಬಿಟ್ಟು ಇಳಿಯುವುದಾಗಿ ಕಂಡಿಷನ್ ಹಾಕಿದ್ದರು, ಆಕೆಯನ್ನು ಕೆಳಗಿಳಿಸಲು ಪೊಲೀಸ್ ಇನ್ಸ್ ಫೆಕ್ಟರ್ ಮಾಡಿದ ಹಲವು ಪ್ರಯತ್ನಗಳು ವಿಫಲವಾದವು, 
ಕೂಡಲೇ ಇನ್ಸ್ ಪೆಕ್ಚರ್ ಬಿಸಿಸಿ ಆಯಕ್ತ ಶಶೆಧರ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು, ತಕ್ಷಣವೇ ಸ್ಥಳಕ್ಕಾಗಿಮಿಸಿದ ಕುರೇರ್ ಭರವಸೆ ನೀಡಿದರು, ಕೊನೆಗೂ 
ಒಂದೂವರೆ ಗಂಟೆಗಳ ನಂತರ ಆಕೆಯನ್ನು ಕೆಳಗಿಳಿಸುವಲ್ಲಿ ಪೊಲೀಸರು ಸಫಲರಾದರು, ಮಹಿಳಾ ಪೇದೆಗಳ ಜೊತೆ ಆಕೆ ಸುರಕ್ಷಿತವಾಗಿ ಕೆಳಗಿಳಿದರು, ತಮ್ಮ ಪ್ರತಿಭಟನೆ ಹಿಂತೆಗೆದುಕೊಂಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT