ಸಂಗ್ರಹ ಚಿತ್ರ 
ರಾಜ್ಯ

ಬಾಲಕನ ಮೇಲೆ ಬೀದಿ ನಾಯಿ ದಾಳಿ ಪ್ರಕರಣ: ಬಿಬಿಎಂಪಿ ಅಧಿಕಾರಿಗಳು ಸೇರಿ 3 ಬಂಧನ

ವಿಭೂತಿಪುರ ಕೆರೆ ಸಮೀಪ ನಡೆದಿದ್ದ ಬಾಲಕ ಪ್ರವೀಣ್ ಮೇಲಿನ ಬೀದಿ ನಾಯಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರ ಸೇರಿ ಮೂವರನ್ನು ಹೆಚ್ಎಎಲ್ ಠಾಣೆ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಬೆಂಗಳೂರು: ವಿಭೂತಿಪುರ ಕೆರೆ ಸಮೀಪ ನಡೆದಿದ್ದ ಬಾಲಕ ಪ್ರವೀಣ್ ಮೇಲಿನ ಬೀದಿ ನಾಯಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರ ಸೇರಿ ಮೂವರನ್ನು ಹೆಚ್ಎಎಲ್ ಠಾಣೆ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. 
ಮಹದೇವಪುರವಲಯದ ಸಹಾಯಕ ನಿರ್ದೇಶಕ (ಪಶುಪಾಲನೆ) ಡಾ.ಶ್ರೀರಾಮ್, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಅರುಣ್ ಮುತಾಲಿಕ್ ದೇಸಾಯಿ ಹಾಗೂ ಗುತ್ತಿಗೆದಾರ ರವಿಶಂಕರ್ ಬಂಧಿತರಾಗಿದ್ದಾರೆ. 
ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುವುದು ಹಾಗೂ ಅವುಗಳಿಗೆ ರೋಗ ನಿರೋಧಕ ಚುಚ್ಚು ಮದ್ದು ಹಾಕಿಸುವ ವಿಷಯದಲ್ಲಿ ಈ ಮೂವರು ನಿರ್ಲಕ್ಷ್ಯತನ ತೋರಿಸಿದ್ದರು. ವಿಭೂತಿಕೆರೆ ಸಮೀಪ ತಮ್ಮ ಪುತ್ರನ ಮೇಲೆ ನಾಯಿ ದಾಳಿಗೆ ಆಧಿಕಾರಿಗಳೇ ಕಾರಣ ಎಂದು ಆರೋಪಿಸಿ ಪ್ರವೀಣ್ ತಾಯಿ ದೂರು ನೀಡಿದ್ದರು. 
ಈ ಹಿನ್ನಲೆಯಲ್ಲಿ ಪ್ರಾಣಿಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯತನ ತೋರಿದ (ಐಪಿಸಿ 289) ಹಾಗೂ ಆಜಾಗರೂಕತೆಯಿಂದ ಪ್ರಾಣಕ್ಕೆ ಸಂಚಕಾರ ತಂದ (338) ಆರೋಪಗಳಡಿ ಎಫ್ಐಆರ್ ದಾಖಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರವೀಣ್ ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣ ನಡುವೆ ಹೋರಟ ನಡೆಸುತ್ತಿದ್ದಾನೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT