ನೇಹಾ 
ರಾಜ್ಯ

ಕೇಶ ವಿನ್ಯಾಸ ತಂದಿಟ್ಟ ಆಪತ್ತು; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ...

ಮಡಿಕೇರಿ: ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ. 
18ರ ಹರೆಯದ ನೇಹಾ ಗಂಗಮ್ಮ ಮೃತ ವಿದ್ಯಾರ್ಥಿನಿ. ಆಕೆ ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ಧಳು. ಕೆಲ ದಿನಗಳ ಹಿಂದೆ ವಿವಿ ಮೊಹಲ್ಲಾದ ಬ್ಯೂಟಿ ಪಾರ್ಲರ್ ವೊಂದರಲ್ಲಿ ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡಿದ್ದಳು. 
ಕೆಲ ದಿನಗಳಲ್ಲೇ ನಿರಂತರವಾಗಿ ಕೂದಲು ಉದುರಲು ಶುರವಾಗಿದೆ. ಇದರಿಂದ ಬೇಸರಗೊಂಡು ಕಾಲೇಜಿಗೂ ಹೋಗದೆ ಪಿಜಿಯಲ್ಲಿ ಉಳಿದುಕೊಂಡಿದ್ದಾಳೆ. ಕೊನೆಗೆ ದಾರಿ ಕಾಣದೆ ಕೊಡಗಿನ ಮನೆಗೆ ಆಗಮಿಸಿದ ಆಕೆ ಮನೆಗೆ ತೆರಳದೆ ಸಮೀಪದಲ್ಲಿರುವ ಬಾಳೆಲೆಯ ಲಕ್ಷ್ಮಣ ತೀರ್ಥ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT