ಸಂಗ್ರಹ ಚಿತ್ರ 
ರಾಜ್ಯ

ಕುದುರೆಗಾಡಿ ಓಟದಲ್ಲಿ ಆಯಾ ತಪ್ಪಿ ಕೆಳಗೆ ಬಿದ್ದ ಸವಾರ ಸಾವು, ಭೀಕರ ವಿಡಿಯೋ!

ರಾಜ್ಯದ ಕಲಘಟಗಿ ತಾಲೂಕಿನ ಬೂದನಗುಡ್ಡ ಗ್ರಾಮದ್ದು ಎನ್ನಲಾದ ಕುದುರೆ ಗಾಡಿ ಓಟದ ಸ್ಪರ್ಧೆಯಲ್ಲಿ ಸವಾರನೊಬ್ಬ ಗಾಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹುಬ್ಬಳ್ಳಿ: ರಾಜ್ಯದ ಕಲಘಟಗಿ ತಾಲೂಕಿನ ಬೂದನಗುಡ್ಡ ಗ್ರಾಮದ್ದು ಎನ್ನಲಾದ ಕುದುರೆ ಗಾಡಿ ಓಟದ ಸ್ಪರ್ಧೆಯಲ್ಲಿ ಸವಾರನೊಬ್ಬ ಗಾಡಿಯಿಂದ ಕೆಳಗೆ ಬಿಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಕುದರೆಗಾಡಿ ಓಟದ ಸ್ಪರ್ಧೆ ಬಸವಣ್ಣ ದೇವರ ಜಾತ್ರೆ ವೇಳೆ ನಡೆದಿದೆ ಎನ್ನಲಾಗಿದೆ. ಕೊನೆ ಶ್ರಾವಣ ಸೋಮವಾರದ ಪ್ರಯುಕ್ತ ನಿನ್ನೆ ಬೂದನಗುಡ್ಡದಲ್ಲಿ ಜಾತ್ರಾ ಮಹೋತ್ಸವದ ವೇಳೆ ಬೈಕ್ ಮತ್ತು ಜಟಕಾ ಬಂಡಿ ಸ್ಪರ್ಧೆಯನ್ನು ನಡೆಸಲಾಗಿತ್ತು ಎಂದು ಹೇಳಲಾಗಿದೆ. 
ಕುದುರೆ ಗಾಡಿಯಿಂದ ಬಿದ್ದ ಸವಾರ ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ. ಆದರೆ ಘಟನೆ ನಡೆದಿದ್ದೇಲಿ ಎಂಬ ಕುರಿತು ಚರ್ಚೆ ಶುರುವಾಗಿದೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿಜಯ್ ಎಂಬುವರು ಈ ವಿಡಿಯೋ ಇಲ್ಲಿಯದಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. 
ಬೇರೆ ಎಲ್ಲೋ ನಡೆದ ಘಟನೆಯನ್ನು ಕಲಘಟಗಿ ತಾಲೂಕಿನಲ್ಲಿ ನಡೆದಿದೆ ಎಂದು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಹೇಳಿದ್ದು ಸದ್ಯಕ್ಕೆ ಈ ಭೀಕರ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: 'ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ..': ಸುದ್ದಿಗಾರನ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ Donald Trump

ಟ್ರಂಪ್-ಮೋದಿ ಮಾತುಕತೆ: ನಾವಿಕರ ಸಾವು ವಿಷಯ ಪ್ರಸ್ತಾಪ; ಇರಾನ್ ಒಪ್ಪಂದದಲ್ಲಿ ಸುರಕ್ಷತೆ ಸೇರಿಸಲು ಪ್ರಧಾನಿ ಒತ್ತಾಯ

'ಕೆಲಸ ಮಾಡಿ ಮುಗಿಸು ಎಂದಿದ್ದರು.. ಹೋಗಿ ಬಾ ಗೀತಮ್ಮ': ನಿರ್ದೇಶಕ ಪವನ್ ಒಡೆಯರ್ ತಾಯಿ ನಿಧನ, ಭಾವುಕ ಪೋಸ್ಟ್!

Cricket: ಭಾರತಕ್ಕೆ ಒಂದೇ ದಿನ 3 ಗೆಲುವು, ಆಫ್ಘಾನಿಸ್ತಾನ ವಿರುದ್ಧವೇ 2 ಜಯಭೇರಿ

Women's T20 World Cup 2026: ಭಾರತಕ್ಕೆ ಭಾರಿ ಆಘಾತ, Shreyanka Patil ಗೆ ಗಾಯ, ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?

SCROLL FOR NEXT