ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಮೇಯರ್ ಆಯ್ಕೆಗೆ ಮುಹೂರ್ತ ಫಿಕ್ಸ್; ಸೆ.28ಕ್ಕೆ ಚುನಾವಣೆ

ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಸೆಪ್ಟೆಂಬರ್ 28 ರಂದು ಚುನಾವಣೆ ನಡೆಯಲಿದೆ...

ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಸೆಪ್ಟೆಂಬರ್ 28 ರಂದು ಚುನಾವಣೆ ನಡೆಯಲಿದೆ. 
ಮೇಯರ್ ಚುನಾವಣೆ ಕುರಿತಂತೆ ಪ್ರಾದೇಶಿಕ ಆಯುಕ್ತ ಶಿವಪ್ರಸಾದ್ ಅವರು ಬಿಬಿಎಂಪಿಗೆ ಪತ್ರ ಬರೆದಿದ್ದು, ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ. 
ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದ್ದು, ಈಗಾಗಲೇ ಮೇಯರ್ ಸ್ಥಾನಕ್ಕೆ ಭಾರೀ ಪೈಪೋಟಿಗಳು ಆರಂಭವಾಗಿವೆ. 
ಮೇಯರ್ ಸಂಪತ್ ರಾಜ್ ಹಾಗೂ ಉಪ ಮೇಯರ್ ಪದ್ಮಾವತಿಯವರ  ಅಧಿಕಾರಾವಧಿ ಈ ತಿಂಗಳಿ ಅಂತ್ಯದಲ್ಲಿ ಮುಕ್ತಾಯವಾಗಲಿದ್ದು, ಈ ಬಾರಿ ಆಯ್ಕೆ ಆಗುವ ಮೇಯರ್ ಈ ಅವಧಿಯ ಮೂರನೇ ಮೇಯರ್ ಆಗಲಿದ್ದಾರೆ. 
ಸೆ.28ರಂದು ಬೆಳಿಗ್ಗೆ 11.30ರ ಸುಮಾರಿಗೆ ಮೇಯರ್ ಆಯ್ಕೆ ಚುನಾವಣೆ ನಡೆಯಲಿದ್ದು, ಬಿಬಿಎಂಪಿ ಸದಸ್ಯರು, ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ಮೇಲ್ಮನೆ ಸದಸ್ಯರು ಸೇರಿ ಒಟ್ಟು 259 ಮಂದಿ ಜನಪ್ರತಿನಿಧಿಗಳು ಮೇಯರ್ ಚುನಾವಣೆಯಲ್ಲಿ ಮತಚಲಾಯಿಸಲಿದ್ದಾರೆ. ಮೇಯರ್ ಆಗಲು ಒಟ್ಟು 130 ಮತಗಳನ್ನು ಗಳಿಸಬೇಕಿದೆ. 
ಬಿಬಿಎಂಪಿಯಲ್ಲಿ ಒಟ್ಟು 198 ಸದಸ್ಯರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 28 ಶಾಸಕರು, 5 ಲೋಕಸಭಾ ಸದಸ್ಯರಿದ್ದಾರೆ. ಇನ್ನು ಬಿಬಿಎಂಪಿಯಲ್ಲಿ ಅತೀ ಹೆಚ್ಚು ಸದಸ್ಯರನ್ನು ಬಿಜೆಪಿ ಹೊಂದಿದೆ. ಕಾಂಗ್ರೆಸ್ ಪಕ್ಷದಲ್ಲಿ 77 ಸದಸ್ಯರಿದ್ದರೆ, ಬಿಜೆಪಿಯಲ್ಲಿ 100 ಸದಸ್ಯರಿದ್ದಾರೆ. ಜೆಡಿಎಸ್ ನಲ್ಲಿ 17 ಸದಸ್ಯರು ಹಾಗೂ 7 ಪಕ್ಷೇತರ ಸದಸ್ಯರಿದ್ದಾರೆ. 
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಇದೀಗ ಜೆಡಿಎಸ್ ತನಗೆ ಮೇಯರ್ ಪಟ್ಟ ನೀಡುವಂತೆ ಆಗ್ರಹಿಸುತ್ತಿದೆ. ಆದರೆ, ಇದಕ್ಕೆ ಕಾಂಗ್ರೆಸ್ ನಕಾರ ವ್ಯಕ್ತಪಡಿಸಿದೆ. 
ಸ್ಥಳೀಯ ಚುನಾವಣಾ ಫಲಿತಾಂಶ ನಮಗೆ ಕೊಂಚ ವಿಶ್ವಾಸವನ್ನು ನೀಡಿದೆ. ಸೋಲನ್ನು ನಾವು ಬಯಸುವುದಿಲ್ಲ. ಈ ಬಾರಿಯ ಮೇಯರ್ ಪಟ್ಟ ಕಾಂಗ್ರೆಸ್ ಪಾಲಿಗೆ ಸೇರಲಿದೆ. ರಾಜ್ಯದ ಉನ್ನತ ಸ್ಥಾನವಾದ ಮುಖ್ಯಮಂತ್ರಿ ಸ್ಥಾನವನ್ನೇ ನಾವು ಜೆಡಿಎಸ್'ಗೆ ನೀಡಿದ್ದೇವೆ. ಇದೀಗ ಮೇಯರ್ ಸ್ಥಾನವನ್ನೂ ಅವರಿಗೆ ಬಿಟ್ಟುಕೊಡುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯರೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!