ಸ್ವಾಮಿ ಅಗ್ನಿವೇಶ್ 
ರಾಜ್ಯ

ಬಡವರ, ರೈತರ ಪರ ಧ್ವನಿ ಎತ್ತುವವರು ನಗರದ ನಕ್ಸಲರೇ?: ಸ್ವಾಮಿ ಅಗ್ನಿವೇಶ್

ಬಡವರ, ರೈತರ ಹಾಗೂ ಆದಿವಾಸಿಗಳ ಪರ ಧ್ವನಿ ಎತ್ತುವವರು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ...

ಬೆಂಗಳೂರು: ಬಡವರ, ರೈತರ ಹಾಗೂ ಆದಿವಾಸಿಗಳ ಪರ ಧ್ವನಿ ಎತ್ತುವವರು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ನಗರದ ನಕ್ಸಲರೇ? ಎಂದು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಗೌರಿ ಲಂಕೇಶ್ ಟ್ರಸ್ಟ್ ಮತ್ತು ಗೌರಿ ಬಳ ಹಮ್ಮಿಕೊಂಡಿದ್ದ ರಾಜಭವನ ಚಲೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಗ್ನಿವೇಶ್ ಅವರು, ಮಾನವ ಪರಿವಾರವರು ಒಂದೇ. ನಮ್ಮ ಮಾತಿಗೆ ನೀವು ಗುಂಡಿನ ಮೂಲಕ ಪ್ರತಿಕ್ರಿಯಿಸಿದರೆ, ನಾವು ಮತದಾನದ ಮೂಲಕ ಉತ್ತರಿಸುತ್ತೇವೆ ಎಂದರು.
ಇದೇ ವೇಳೆ ಸನಾತನ ಸಂಸ್ಥೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಗ್ನಿವೇಶ್ ಅವರು, ಅದು ಸಾಮಾನ್ಯ ಧರ್ಮ ಪ್ರಚಾರ ಸಂಸ್ಥೆ ಅಲ್ಲ. ಅದೊಂದು ಭಯೋತ್ಪದನಾ ಸಂಸ್ಥೆ. ಅದರ ಮೇಲೆ ಸರ್ಕಾರ ತೀವ್ರ ನಿಗಾ ವಹಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್ ಎಸ್ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಗ್ನಿವೇಶ್, ಮೋದಿ ಒಬ್ಬ ಸಂಘ ಪ್ರಚಾರಕ, ಅವರನ್ನು ಗುಜರಾತ್ ನ ಮುಖ್ಯಮಂತ್ರಿ ಮಾಡಲಾಯಿತು. ಆರ್ ಎಸ್ಎಸ್ ಎಂದರೆ ಬಹುಮುಖಿ ರಾಕ್ಷಸ. ಬೇರೆ ಬೇರೆ ಹೆಸರುಗಳಲ್ಲಿ ಅದರ ಅಸ್ತಿತ್ವ ಇದೆ. ಅದರ ನಾಯಕ ಇಟ್ಲರ್ ಎಂದು ಆರೋಪಿಸಿದರು. ಅಲ್ಲದೆ ಆರ್ ಎಸ್ಎಸ್ ಬಹುಮುಖಿ ಸಂಸ್ಥೆಗಳಲ್ಲಿ ಸನಾತನ ಸಂಸ್ಥೆಯೂ ಒಂದು ಎಂದು ದೂರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT