ಸ್ವಾಮಿ ಅಗ್ನಿವೇಶ್ 
ರಾಜ್ಯ

ಬಡವರ, ರೈತರ ಪರ ಧ್ವನಿ ಎತ್ತುವವರು ನಗರದ ನಕ್ಸಲರೇ?: ಸ್ವಾಮಿ ಅಗ್ನಿವೇಶ್

ಬಡವರ, ರೈತರ ಹಾಗೂ ಆದಿವಾಸಿಗಳ ಪರ ಧ್ವನಿ ಎತ್ತುವವರು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ...

ಬೆಂಗಳೂರು: ಬಡವರ, ರೈತರ ಹಾಗೂ ಆದಿವಾಸಿಗಳ ಪರ ಧ್ವನಿ ಎತ್ತುವವರು ನಗರದ ನಕ್ಸಲರು ಎಂದು ಕರೆಯುವುದಾದರೆ ನಾವೂ ನಗರದ ನಕ್ಸಲರೇ? ಎಂದು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಗೌರಿ ಲಂಕೇಶ್ ಟ್ರಸ್ಟ್ ಮತ್ತು ಗೌರಿ ಬಳ ಹಮ್ಮಿಕೊಂಡಿದ್ದ ರಾಜಭವನ ಚಲೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಗ್ನಿವೇಶ್ ಅವರು, ಮಾನವ ಪರಿವಾರವರು ಒಂದೇ. ನಮ್ಮ ಮಾತಿಗೆ ನೀವು ಗುಂಡಿನ ಮೂಲಕ ಪ್ರತಿಕ್ರಿಯಿಸಿದರೆ, ನಾವು ಮತದಾನದ ಮೂಲಕ ಉತ್ತರಿಸುತ್ತೇವೆ ಎಂದರು.
ಇದೇ ವೇಳೆ ಸನಾತನ ಸಂಸ್ಥೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಗ್ನಿವೇಶ್ ಅವರು, ಅದು ಸಾಮಾನ್ಯ ಧರ್ಮ ಪ್ರಚಾರ ಸಂಸ್ಥೆ ಅಲ್ಲ. ಅದೊಂದು ಭಯೋತ್ಪದನಾ ಸಂಸ್ಥೆ. ಅದರ ಮೇಲೆ ಸರ್ಕಾರ ತೀವ್ರ ನಿಗಾ ವಹಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್ ಎಸ್ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಗ್ನಿವೇಶ್, ಮೋದಿ ಒಬ್ಬ ಸಂಘ ಪ್ರಚಾರಕ, ಅವರನ್ನು ಗುಜರಾತ್ ನ ಮುಖ್ಯಮಂತ್ರಿ ಮಾಡಲಾಯಿತು. ಆರ್ ಎಸ್ಎಸ್ ಎಂದರೆ ಬಹುಮುಖಿ ರಾಕ್ಷಸ. ಬೇರೆ ಬೇರೆ ಹೆಸರುಗಳಲ್ಲಿ ಅದರ ಅಸ್ತಿತ್ವ ಇದೆ. ಅದರ ನಾಯಕ ಇಟ್ಲರ್ ಎಂದು ಆರೋಪಿಸಿದರು. ಅಲ್ಲದೆ ಆರ್ ಎಸ್ಎಸ್ ಬಹುಮುಖಿ ಸಂಸ್ಥೆಗಳಲ್ಲಿ ಸನಾತನ ಸಂಸ್ಥೆಯೂ ಒಂದು ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT