ದೋಣಿಯಲ್ಲಿ ಬೆಂಕಿ 
ರಾಜ್ಯ

ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ: 1 ಸಾವು, 7 ಮಂದಿಗೆ ಗಾಯ

ಮೀನುಗಾರಿಕೆ ದೋಣಿಯಲ್ಲಿ ಸಮುದ್ರ ಮಧ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದ್ದರಿಂದ ಒಬ್ಬರು ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಾರವಾರದ ಬಳಿ ನಡೆದಿದೆ.

ಕಾರವಾರ: ಮೀನುಗಾರಿಕೆ ದೋಣಿಯಲ್ಲಿ  ಸಮುದ್ರ ಮಧ್ಯದಲ್ಲಿ  ಆಕಸ್ಮಿಕ ಬೆಂಕಿ ಕಾಣಸಿಕೊಂಡಿದ್ದರಿಂದ  ಒಬ್ಬರು ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಆ ಹಡಗಿನಲ್ಲಿ 26 ಮಂದಿ ಮೀನುಗಾರಿದ್ದರು ಎನ್ನಲಾಗಿದ್ದು, ಸಮೀಪದಲ್ಲಿಯೇ ಮತ್ತೊಂದು ಹಡಗಿನಲ್ಲಿದ್ದ  ಇತರ ಮೀನುಗಾರರು  ಅವರೆಲ್ಲರನ್ನೂ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಜಲಾಪದ್ಮ ಎಂಬ ಹೆಸರಿನಲ್ಲಿ ನೋಂದಣಿಯಾಗಿರುವ ಹಡಗು ನಿನ್ನೆ ಬೆಳಿಗ್ಗೆ ಮೀನುಗಾರಿಕೆಗಾಗಿ ಹೋಗಿದ್ದು, ವಾಪಾಸ್ಸಾಗುತ್ತಿದ್ದಾಗ ಬ್ಯಾಟರಿ ಸ್ಪೂಟಗೊಂಡು  ಬೆಂಕಿ ಉಂಟಾಗಿದೆ. ಇದರಿಂದಾಗಿ ಆತಂಕಕೊಳಗಾದ ಕೆಲವು ಮೀನುಗಾರರು ಸಮುದ್ರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಹಡಗಿನ ಚಾಲಕ ದೀಪಕ್ ಹರಿಕಾಂತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬ್ಯಾಟರಿ ಸ್ಪೋಟಗೊಂಡ ಕೆಲವೇ ಸೆಕೆಂಡ್ ಗಳಲ್ಲಿ ಬೆಂಕಿ ಉಂಟಾಯಿತು. ನೌಕ ಹಡಗು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಿಸಿತು. ಇತರ ಮೀನುಗಾರರು ತಮ್ಮನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಜಲಾಪದ್ಮ ಹತ್ತಿರದಲ್ಲಿದ್ದ ತಮಿಳುನಾಡಿನ ಮೀನುಗಾರರು  ಗಾಯಾಳುಗಳನ್ನು ರಕ್ಷಿಸಿದ್ದಾರೆ. ಮೃತನ ಹೆಸರು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಮಂದಿ ಗಾಯಾಳುಗಳ ಪೈಕಿ ಐವರು ಒಡಿಶಾ ಮತ್ತಿಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇಬ್ಬರು ಶೇ, 50 ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಭಾರತೀಯ ಕರಾವಳಿ ಭದ್ರತಾ ಹಡಗು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೃತಪಟ್ಟ ಮೀನುಗಾರನ ಮೃತದೇಹವನ್ನು ತರಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ. ನಾಗರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT