ದೋಣಿಯಲ್ಲಿ ಬೆಂಕಿ 
ರಾಜ್ಯ

ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ: 1 ಸಾವು, 7 ಮಂದಿಗೆ ಗಾಯ

ಮೀನುಗಾರಿಕೆ ದೋಣಿಯಲ್ಲಿ ಸಮುದ್ರ ಮಧ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದ್ದರಿಂದ ಒಬ್ಬರು ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಾರವಾರದ ಬಳಿ ನಡೆದಿದೆ.

ಕಾರವಾರ: ಮೀನುಗಾರಿಕೆ ದೋಣಿಯಲ್ಲಿ  ಸಮುದ್ರ ಮಧ್ಯದಲ್ಲಿ  ಆಕಸ್ಮಿಕ ಬೆಂಕಿ ಕಾಣಸಿಕೊಂಡಿದ್ದರಿಂದ  ಒಬ್ಬರು ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಆ ಹಡಗಿನಲ್ಲಿ 26 ಮಂದಿ ಮೀನುಗಾರಿದ್ದರು ಎನ್ನಲಾಗಿದ್ದು, ಸಮೀಪದಲ್ಲಿಯೇ ಮತ್ತೊಂದು ಹಡಗಿನಲ್ಲಿದ್ದ  ಇತರ ಮೀನುಗಾರರು  ಅವರೆಲ್ಲರನ್ನೂ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಜಲಾಪದ್ಮ ಎಂಬ ಹೆಸರಿನಲ್ಲಿ ನೋಂದಣಿಯಾಗಿರುವ ಹಡಗು ನಿನ್ನೆ ಬೆಳಿಗ್ಗೆ ಮೀನುಗಾರಿಕೆಗಾಗಿ ಹೋಗಿದ್ದು, ವಾಪಾಸ್ಸಾಗುತ್ತಿದ್ದಾಗ ಬ್ಯಾಟರಿ ಸ್ಪೂಟಗೊಂಡು  ಬೆಂಕಿ ಉಂಟಾಗಿದೆ. ಇದರಿಂದಾಗಿ ಆತಂಕಕೊಳಗಾದ ಕೆಲವು ಮೀನುಗಾರರು ಸಮುದ್ರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಹಡಗಿನ ಚಾಲಕ ದೀಪಕ್ ಹರಿಕಾಂತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಬ್ಯಾಟರಿ ಸ್ಪೋಟಗೊಂಡ ಕೆಲವೇ ಸೆಕೆಂಡ್ ಗಳಲ್ಲಿ ಬೆಂಕಿ ಉಂಟಾಯಿತು. ನೌಕ ಹಡಗು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಿಸಿತು. ಇತರ ಮೀನುಗಾರರು ತಮ್ಮನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಜಲಾಪದ್ಮ ಹತ್ತಿರದಲ್ಲಿದ್ದ ತಮಿಳುನಾಡಿನ ಮೀನುಗಾರರು  ಗಾಯಾಳುಗಳನ್ನು ರಕ್ಷಿಸಿದ್ದಾರೆ. ಮೃತನ ಹೆಸರು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಮಂದಿ ಗಾಯಾಳುಗಳ ಪೈಕಿ ಐವರು ಒಡಿಶಾ ಮತ್ತಿಬ್ಬರು ಉತ್ತರ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇಬ್ಬರು ಶೇ, 50 ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಭಾರತೀಯ ಕರಾವಳಿ ಭದ್ರತಾ ಹಡಗು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೃತಪಟ್ಟ ಮೀನುಗಾರನ ಮೃತದೇಹವನ್ನು ತರಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ. ನಾಗರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT