ಗೌರಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಹಿತಿ ಗಿರೀಶ್ ಕಾರ್ನಾಡ್ 
ರಾಜ್ಯ

ನಾನು ಕೂಡ ಅರ್ಬನ್ ನಕ್ಸಲ್: ಸಾಹಿತಿ ಗಿರೀಶ್ ಕಾರ್ನಾಡ್ ಘೋಷಣೆ

ನಾನು ಕೂಡ ಅರ್ಬನ್ ನಕ್ಸಲ್ (ನಗರದ ನಕ್ಸಲ್ ವಾದಿ) ಎಂದು ಜ್ಞಾನಪೀಠ ಪುರಸ್ಕೃತ ಮತ್ತು ಖ್ಯಾತ ಸಾಹಿತಿ, ನಟ ಗಿರೀಶ್ ಕಾರ್ನಾಡ್ ಘೋಷಿಸಿಕೊಡಿದ್ದಾರೆ.

ಬೆಂಗಳೂರು: ನಾನು ಕೂಡ ಅರ್ಬನ್ ನಕ್ಸಲ್ (ನಗರದ ನಕ್ಸಲ್ ವಾದಿ) ಎಂದು ಜ್ಞಾನಪೀಠ ಪುರಸ್ಕೃತ ಮತ್ತು ಖ್ಯಾತ ಸಾಹಿತಿ, ನಟ ಗಿರೀಶ್ ಕಾರ್ನಾಡ್ ಘೋಷಿಸಿಕೊಡಿದ್ದಾರೆ.
ಸಾಹಿತಿ, ವಿಚಾರವಾದಿ ಮತ್ತು ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿ ನಿಮಿತ್ತ ನಗರದ  ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಗೌರಿ ದಿನ ನಿಮಿತ್ತದ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಿರೀಶ್ ಕಾರ್ನಾಡ್ ಅವರು, ತಮ್ಮ ಕುತ್ತಿಗೆಗೆ "ನಾನೂ ಕೂಡಾ ಅರ್ಬನ್ ನಕ್ಸಲ್" ಎಂಬ ಬೋರ್ಡ್ ಹಾಕಿಕೊಂಡು ಕುಳಿತಿದ್ದರು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಪೊಲೀಸರು ವಿಚಾರವಾದಿಗಳು ಮತ್ತು ಸಾಹಿತಿಗಳನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಕಾರ್ನಾಡ್ ಅವರು ಈ ರೀತಿಯ ವಿನೂತನ ರೀತಿ ಪ್ರತಿಭಟನೆ ಮಾಡಿದ್ದಾರೆ ಎನ್ನಲಾಗಿದೆ. 
ಈ ವೇಳೆ ಮಾತನಾಡಿದ ಅವರು, 'ಪುಣೆ ಪೊಲೀಸರು ಐದು ಮಂದಿ ಎಡಪಂಥೀಯ ಹೋರಾಟಗಾರರನ್ನು ಅರ್ಬನ್ ನಕ್ಸಲ್ ಎಂದು ಹೆಸರಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇದಕ್ಕೆ ದೇಶದಾದ್ಯಂತ ಪ್ರಗತಿಪರರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ಪ್ರಾಯೋಜಿತ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ದಕ್ಷಿಣದ ಇತರೆ ರಾಜ್ಯಗಳು ದಾಪುಗಾಲು, ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!