ಸಂಗ್ರಹ ಚಿತ್ರ 
ರಾಜ್ಯ

ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಕಡಿವಾಣ, ಸುತ್ತೋಲೆ ಮೂಲಕ ನಿಯಂತ್ರಣ ಹೇರಿದ ಸರ್ಕಾರ

ಇನ್ನು ರಾಜ್ಯದ ಗಣ್ಯರು, ಆಡಳಿತಶಾಹಿಗಳಿಗೆ ವಿದೇಶ ಪ್ರವಾಸ ತೆರಳುವುದು ಅಷ್ಟು ಸರಳವಾಗಿರುವುದಿಲ್ಲ. ಸರ್ಕಾರ ಹೊರಡಿಸಿರುವ ನೂತನ ಸುತ್ತೋಲೆಯ ಅನುಸಾರ....

ಬೆಂಗಳೂರು: ಇನ್ನು ರಾಜ್ಯದ ಗಣ್ಯರು, ಆಡಳಿತಶಾಹಿಗಳಿಗೆ ವಿದೇಶ ಪ್ರವಾಸ ತೆರಳುವುದು ಅಷ್ಟು ಸರಳವಾಗಿರುವುದಿಲ್ಲ. ಸರ್ಕಾರ ಹೊರಡಿಸಿರುವ ನೂತನ ಸುತ್ತೋಲೆಯ ಅನುಸಾರವಿದೇಅ ಪ್ರವಾಸದ ಎಲ್ಲಾ ವಿವರಗಳನ್ನು  ಮುಖ್ಯಮಂತ್ರಿಗಳಿಗೆ ನೇರವಾಗಿ ಅನುಮೋದನೆಗೆ ಕಳುಹಿಸುವ ಬದಲು ಇಲಾಖೆಗಳ ಉಸ್ತುವಾರಿ ಸಚಿವರಿಗೆ ನಿಡಬೇಕು.
ಅಲ್ಲದೆ ಐಎಎಸ್ ಅಧಿಕಾರಿಗಳ ಕೇಂದ್ರ ಗೃಹ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮೋದನೆ ಪಡೆಯಬೇಕೆನ್ನುವ ಮೂಲಕ ಅನುಮೋದನೆ ವ್ಯಾಪ್ತಿಯನ್ನು ಸಹ ವಿಸ್ತರಿಸಲಾಗಿದೆ
ಏಕಾಂಗಿಯಾಗಿ ಪ್ರಯಾಣಿಸುವ ಅಥವಾ ಸಚಿವರೊಂದಿಗೆ ನಿಯೋಗದ ಭಾಗವಾಗಿ, ಭೇಟಿ ನೀಡುವ ಅಧಿಕಾರಿಗಳು ಹಾಗೆ ಭೇಟಿ ನೀಡುವ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸಬೇಕು. ಸಾಂಪ್ರದಾಯಿಕ ವೆಚ್ಚ ಹೊರತಾಗಿ ವಿದೇಶಿ ಆತಿಥ್ಯ ಸ್ವೀಕಾರ ಪ್ರವಾಸದ ಅಧಿಕಾರಿಗಳ ಜೊತೆಯಲ್ಲಿರುವವರ ವಿವರಗಳು ಸೇರಿ ಎಲ್ಲಾ ವಿವರಗಳನ್ನು ಪ್ರತಿ ಇಲಾಖೆಯ ಮಂತ್ರಿಗಳಿಂದ ಅನುಮತಿ ಪಡೆಯಬೇಕು.
ವ್ಯಕ್ತಿಗತ ಮತ್ತು ಆಡಳಿತಾತ್ಮಕ ಸುಧಾರಣೆಗಳ ಇಲಾಖೆ, ಮತ್ತು ಮುಖ್ಯಮಂತ್ರಿಗಳಿಗೆ ಮಾಹಿತಿ ರವಾನಿಸಬೇಕು. ವಿದೇಶಿ ಆತಿಥ್ಯದ ಸಂದರ್ಭದಲ್ಲಿ ಗೃಹ ಸಚಿವಾಲಯದೊಡನೆ ಸಮಾಲೋಚಿಸಿದ ಬಳಿಕ ಎಫ್ ಸಿ ಆರ್ ಎ ಅನುಮತಿ ಹೊರತಾಗಿ  ಐಎಎಸ್ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಿಂದ ರಾಜಕೀಯ ಸ್ಪಷ್ಟೀಕರಣವನ್ನು ಪಡೆಯಲು ಹೇಳಲಾಗಿದೆ.
ಇಡೀ ಪ್ರಕ್ರಿಯೆಯು 2-3 ವಾರಗಳವರೆಗೆ ತೆಗೆದುಕೊಳ್ಳುತ್ತದೆ. ಅಧಿಕಾರಿಗಳು ಎಲ್ಲಾ ಅವಶ್ಯಕತೆಗಳನ್ನು ಪೂರೈಸುವ ಅಗತ್ಯವಿದೆ, ಎಲ್ಲಾ ಸ್ಪಷ್ಟತೆಗಳನ್ನು ಪಡೆದುಕೊಳ್ಳಬೇಕು ಮತ್ತು ಮುಂಚಿತವಾಗಿ ತಮ್ಮ ಪತ್ರಗಳನ್ನು ಲಗತ್ತಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT