ದೇವೇಗೌಡ 
ರಾಜ್ಯ

ಮುಂದುವರಿದ ದೈವಿಕ ಯಾತ್ರೆ: ಕಠ್ಮಂಡುವಿನ ಪಶುಪತಿನಾಥನ ಸನ್ನಿದಿಗೆ ದೇವೇಗೌಡರ ಕುಟುಂಬ!

: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಪಶುಪತಿನಾಥ ಮಂದಿರಕ್ಕೆ ತೆರಳಲು ಸಿದ್ಧರಾಗಿದ್ದಾರೆ. ದೇವೇಗೌಡರು ಗುರುವಾರ ಸಂಜೆ ನವದೆಹಲಿಯಿಂದ ನೇಪಾಳ ರಾಜಧಾನಿ ...

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಪಶುಪತಿನಾಥ ಮಂದಿರಕ್ಕೆ ತೆರಳಲು ಸಿದ್ಧರಾಗಿದ್ದಾರೆ. ದೇವೇಗೌಡರು ಗುರುವಾರ ಸಂಜೆ ನವದೆಹಲಿಯಿಂದ ನೇಪಾಳ ರಾಜಧಾನಿ ಕಟ್ಮಂಡುವಿಗೆ ತೆರಳಲಿದ್ದು ಶುಕ್ರವಾರ ಪಶುಪತಿನಾಥ ಮಂದಿರಕ್ಕೆ ತೆರಳಲಿದ್ದಾರೆ.
ದೆಹಲಿಯ ಜ್ಯೋತಿಷಿಯೊಬ್ಬರು ಪಶುಪತಿನಾಥನ ದರ್ಶನ ಪಡೆಯುವಂತೆ ಸಲಹೆ ನೀಡಿದ್ದರಿಂದ ದೇವೇಗೌಡರು ನೇಪಾಳಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇವರ ದರ್ಶನದ ಬಳಿಕ ಪ್ರಧಾನಿ ಶನಿವಾರ ಬೆಂಗಳೂರಿಗೆ ವಾಪಸ್​ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಾರ ದೈವಭಕ್ತರಾಗಿರುವ ದೇವೇಗೌಡರು ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಹೋಮ ಹವನ ನಡೆಸಿರುವುದಲ್ಲದೇ ಅವರ ಪುತ್ರ ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ ಆಂಧ್ರಪ್ರದೇಶದ ತಿರುಪತಿಗೆ ತೆರಳಿ ವೆಂಕಟೇಶ್ವರನ ದರ್ಶನವನ್ನು ಪಡೆದಿದ್ದಾರೆ
ಇತ್ತೀಚೆಗಷ್ಟೆ ಕೇದಾರನಾಥ ದೇವಾಲಯಕ್ಕೆ ತೆರಳುವಂತೆ ನಿರ್ಧರಿಸಿದ್ದರು ಆದರೆ ಮಳೆಯಿಂದಾಗಿ ಮುಂದೂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT