ಅರಮನೆಗೆ ಆಗಮಿಸಿದ ದಸರಾ ಗಜಪಡೆ 
ರಾಜ್ಯ

ಮೈಸೂರು ಅರಮನೆಗೆ ಆಗಮಿಸಿದ ದಸರಾ ಗಜಪಡೆ: ಸಾಂಪ್ರದಾಯಿಕ ಸ್ವಾಗತ

ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗಜಪಡೆಗೆ ಅರಮನೆ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗಜಪಡೆಗೆ ಅರಮನೆ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. 
ನಾಗರಹೊಳೆ ಅರಣ್ಯ ಪ್ರದೇಶದ ವೀರನಹೊಸಳ್ಳಿಯಿಂದ ಅಂಬಾರಿ ಆನೆ ಅರ್ಜುನ ಸೇರಿದಂತೆ ಒಟ್ಟು 5 ಆನೆಗಳು ನಗರಕ್ಕೆ ಭಾನುವಾರ ಆಗಮಿಸಿದ್ದು, ಅಶೋಕಪುರಂನಲ್ಲಿರುವ ಅರಣ್ಯ ಭವನದ ಆವರಣದಲ್ಲಿ ಬೀಡು ಬಿಟ್ಟಿದ್ದವು. ಅಲ್ಲಿಂದ ಮೂರು ಕಿಮೀ. ದೂರ ಸಂಜೆ 4 ರಿಂದ ಮೆರವಣಿಗೆ ಮೂಲಕ ಅರಮನೆ ಜಯಮಾರ್ತಾಂಡ ಹೆಬ್ಬಾಗಿಲ ಬಳಿ ಆನೆಗಳನ್ನು ಕರೆತರಲಾಯಿತು. 
ವರಲಕ್ಷ್ಮಿ, ಗೋಪಿ, ವಿಕ್ರಮ, ಧನಂಜಯ ಮತ್ತು ಚೈತ್ರ ಆನೆಗಳು ಅಂಬಾರಿ ಹೊರುವ ಅರ್ಜುನನ ಜೊತೆ ಅರಮನೆಗೆ ಬಂದಿವೆ, ಮತ್ತೊಂದು ತಂಡದಲ್ಲಿ ಉಳಿದ ಆರು ಆನೆಗಳು ಶೀಘ್ರವೇ ಮೈಸೂರಿಗೆ ಬರಲಿವೆ
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ, ಕಬ್ಬು ತಿನ್ನಿಸುವ ಮೂಲಕ ಗಜಪಡೆಯನ್ನು ಬರಮಾಡಿಕೊಂಡರು. ಸಶಸ್ತ್ರ ಪೊಲೀಸ್‌ ಪಡೆ ಹಾಗೂ ಅಶ್ವಾರೋಹಿ ಪೊಲೀಸ್‌ ಪಡೆಗಳು ಗೌರವ ವಂದನೆ ಸಲ್ಲಿಸಿದವು. 
ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್‌ ಅವರ ನೇತೃತ್ವದಲ್ಲಿ ಗಜಪೂಜೆ ಸೇರಿದಂತೆ ನಾನಾ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ- ಅಶ್ವಿನಿ ವೈಷ್ಣವ್

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ಮೊಹಮ್ಮದ್ ಯೂನಸ್ ವಿವಾದಕ್ಕೆ ಗುರಿ!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT