ಗೌರಿ ದಿನಾಚರಣೆ ವೇಳೆ ನ್ಯಾಯಪಥ ಪತ್ರಿಕೆ ಲೋಕಾರ್ಪಣೆ 
ರಾಜ್ಯ

ಗೌರಿ ದಿನಾಚರಣೆ: ಬೆದರಿಕೆಗೆ, ಗನ್ನಿಗೆ ಎಂದೂ ನಾವು ಬಗ್ಗುವುದಿಲ್ಲ: ಹೋರಾಟಗಾರರ ಎಚ್ಚರಿಕೆ

ಕೋಮುವಾದಿಗಳ ಬೆದರಿಕೆಗೆ ಮತ್ತು ಅವರ ಗನ್ನಿಗೆ ನಾವು ಎಂದೂ ಬಗ್ಗುವುದಿಲ್ಲ ಎಂದು ವಿಚಾರವಾದಿಗಳು ಮತ್ತು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಕೋಮುವಾದಿಗಳ ಬೆದರಿಕೆಗೆ ಮತ್ತು ಅವರ ಗನ್ನಿಗೆ ನಾವು ಎಂದೂ ಬಗ್ಗುವುದಿಲ್ಲ ಎಂದು ವಿಚಾರವಾದಿಗಳು ಮತ್ತು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರವಾದಿಗಳು ಕೇಂದ್ರ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಒಕ್ಕೋರಲಿನಿಂದ ಹೇಳಿದೆ. ಗೌರಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿ ವೈರ್ ಪತ್ರಿಕೆ ಸಂಪಾದಕ ಸಿದ್ಧಾರ್ಥ ವರದರಾಜನ್ ಅವರು, 'ಆದಿವಾಸಿಗಳು ಹಾಗೂ ದಲಿತ ಹಕ್ಕುಗಳ ಹೋರಾಟಗಾರರನ್ನು, ಬುದ್ಧಿಜೀವಿಗಳನ್ನು ಹಾಗೂ ವಕೀಲರನ್ನು ಬಂಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ' ಎಂದು ಆರೋಪಿಸಿದರು.
ಅಂತೆಯೇ 'ಅನ್ಯಾಯದ ವಿರುದ್ದ ಧ್ವನಿ ಎತ್ತಿದವರವನ್ನು ದಮನಿಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ. ಮೋದಿ ಬಳಿ ಜಾರಿ ನಿರ್ದೇಶನಾಲಯ, ಸಿಬಿಐನಂಥಹ ಸಂಸ್ಥೆಗಳಿರಬಹುದು. ಅಧಿಕಾರ ಇರಬಹುದು. ಆದರೆ ನಮ್ಮ ಬಳಿ ಲೇಖನಿ ಇದೆ. ಗನ್ನಿಗೆ ಬಗ್ಗದ ಪೆನ್ನು ನಮ್ಮದು. ದಬ್ಬಾಳಿಕೆ ವಿರುದ್ಧದ ಸಮರವನ್ನು ಈ ಲೇಖನಿಯಿಂದಲೇ ಗೆಲ್ಲುತ್ತೇವೆ. ಇತ್ತೀಚೆಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳು, ಬುದ್ಧಿಜೀವಿಗಳ ಬಂಧನ ಆಡಳಿತ ಪಕ್ಷದ ಹತಾಶೆಯ ಪ್ರತೀಕದಂತೆ ಕಾಣುತ್ತಿದೆ. ಆಡಳಿತ ನಡೆಸುವವರ ಪರವಾಗಿರುವ ಗೂಂಡಾಗಳು ಹೋರಾಟಗಾರರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು.
'ಗೌರಿ ಸಂವಿಧಾನ, ಜಾತ್ಯಾತೀತ ತತ್ವ, ಶಾಂತಿಯ ಬಗ್ಗೆ ಅಪಾರ ನಂಬಿಕೆ ಹೊಂದಿದ್ದವರು. ಆದಿವಾಸಿ ಹಾಗೂ ದಲಿತರ ಹಕ್ಕುಗಳ ಬಗ್ಗೆ ಬದ್ಧತೆ ಹೊಂದಿದ್ದರು. ಆಕೆಯ ಹತ್ಯೆಯಿಂದ ನಾವೆಲ್ಲ ಆತಂಕಕ್ಕೊಳಗಾಗುತ್ತೇವೆ ಎಂದು ಅವರು ಭಾವಿಸಿರಬಹುದು. ನಾವೆಲ್ಲ ಒಂದು ಕುಟುಂಬವಾಗಿ ಹೋರಾಡಿ ಆಕೆಯ ಆತ್ಮ ಸಮರ್ಪಣೆಗೆ ನ್ಯಾಯ ಒದಗಿಸುತ್ತೇವೆ ಎಂದು ವರದರಾಜನ್ ಹೇಳಿದರು.
ನ್ಯಾಯಪಥ ಲೋಕಾರ್ಪಣೆ
ಇದೇ ವೇಳೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರು ಗೌರಿ ಲಂಕೇಶ್ ಅವರ ಪತ್ರಿಕೆ ನ್ಯಾಯಪಥವನ್ನು ಲೋಕಾರ್ಪಣೆ ಮಾಡಿದರು. ಗೌರಿ ಲಂಕೇಶ್ ಪತ್ರಿಕೆಯ ಹೆಸರನ್ನು ಇದೀಗ ನ್ಯಾಯಪಥ ಎಂದು ಬದಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT