ಮರಕ್ಕೆ ಕಟ್ಟಿ ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ 
ರಾಜ್ಯ

ಬೆಂಗಳೂರು: ನಿಲ್ಲದ ಮಕ್ಕಳ ಕಳ್ಳರ ವದಂತಿ ಹಾವಳಿ: ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ

ಮಕ್ಕಳ ಕಳ್ಳರ ವದಂತಿಯಿದಾಗಿ ಅಮಾಯಕರ ಮೇಲಿನ ದಾಳಿ ಪ್ರಕರಣಕ್ಕೆ ಬ್ರೇಕ್ ಬಿದ್ದಿದೆ ಎನ್ನುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ಬಯಲಾಗಿದೆ.

ಬೆಂಗಳೂರು: ಮಕ್ಕಳ ಕಳ್ಳರ ವದಂತಿಯಿದಾಗಿ ಅಮಾಯಕರ ಮೇಲಿನ ದಾಳಿ ಪ್ರಕರಣಕ್ಕೆ ಬ್ರೇಕ್ ಬಿದ್ದಿದೆ ಎನ್ನುವಾಗಲೇ ಅಂತಹುದೇ ಮತ್ತೊಂದು ಪ್ರಕರಣ ಬಯಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ಕಳ್ಳ ಎಂದು ಭಾವಿಸಿ ಸ್ಥಳೀಯರು ಮಾನಸಿಕ ಅಸ್ವಸ್ಥನನ್ನು ಹಿಡಿದು ಮನಸೋ ಇಚ್ಛೆ ಥಳಿಸಿರುವ ಘಟನೆ ನಡೆದಿದೆ. ಕಾಡುಗೋಡಿ ಠಾಣಾ ವ್ಯಾಪ್ತಿಯ ಪಟಾಲಮ್ಮ ಲೇಔಟ್‍ನಲ್ಲಿ ಈ ಘಟನೆ ನಡೆದಿದ್ದು, ಬೇರೆ ಭಾಷೆಯಲ್ಲಿ ಮಾತನಾಡಿದ ಎಂದು ವ್ಯಕ್ತಿಯ ಮೇಲೆ ಸ್ಥಳೀಯರು ಮಕ್ಕಳ ಕಳ್ಳ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆತನನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ.
ಈ ವೇಳೆ ಕೆಲ ಆಕ್ರೋಶಿತ ಸ್ಥಳೀಯ ಯುವಕರು ವ್ಯಕ್ತಿಯ ಮೇಲೆ ಮನಸೋ ಇಚ್ಛೆ ದಾಳಿ ಮಾಡಿದ್ದಾರೆ, ಎಷ್ಟು ಜನ ಬಂದಿರುವಿರಿ? ಎಲ್ಲಿದೆ ನಿನ್ನ ಆಧಾರ್ ಕಾರ್ಡ್? ನಿಂಗೆ ತಿನ್ನೋಕೆ ಕೊಡಬೇಕಾ ಅಂತಾ ಕೇಳುತ್ತಲೇ ಕಪಾಳಕ್ಕೆ ಹೊಡೆದು ಅಮಾನವೀಯತೆ ಮೆರೆದಿದ್ದಾರೆ. ಕೆಲವರಂತು ಮರದ ತುಂಡಿನಿಂದ ಥಳಿಸಿದ್ದಾರೆ. ಕೆಲವರು ಇದನ್ನು ವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇನ್ನು ವಿಚಾರ ತಿಳಿಯುತ್ತಿದ್ದಂತೆಯೇ ಕಾಡುಗೋಡಿ ಪೊಲೀಸರು ಸ್ಖಳಕ್ಕೆ ದೌಡಾಯಿಸಿದ್ದು, ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಅಲ್ಲದೆ ಹಲ್ಲೆ ಪ್ರಕರಣ ದಾಖಲಿಸಿಕೊಂಡು ದಾಳಿ ಮಾಡಿದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 
ಇತ್ತೀಚೆಗಷ್ಟೇ ಕರ್ನಾಟಕದ ಬೀದರ್ ನಲ್ಲಿ ಮಕ್ಕಳ ಕಳ್ಳರು ಎಂದು ಟೆಕ್ಕಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಂದು ಹಾಕಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!