ವ್ಯಕ್ತಿಯನ್ನು ರಕ್ಷಿಸುತ್ತಿರುವುದು 
ರಾಜ್ಯ

ಹುಬ್ಬಳ್ಳಿ: ಆಳವಾದ ಗುಂಡಿಗೆ ಬಿದ್ದ ಪಾದಚಾರಿಯ ರಕ್ಷಣೆ

ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ...

ಹುಬ್ಬಳ್ಳಿ: ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ ಬಿದ್ದಿದ 34 ವರ್ಷದ ಪಾದಚಾರಿಯನ್ನು ಗುರುವಾರ ರಾತ್ರಿ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ರಸ್ತೆ ಓವರ್ ಬ್ರಿಡ್ಜ್ ಅಗಲಿಕರಣಕ್ಕಾಗಿ ಈ ಗುಂಡಿ ಅಗೆಯಲಾಗಿದ್ದು, ಶಕ್ತಿನಗರ ನಿವಾಸಿ ಅಬ್ದುಲ್ ಮನಿಯಾರ್ ಅವರು ನಿನ್ನೆ ರಾತ್ರಿ ಕೇಶವಪುರದಿಂದ ಕೋರ್ಟ್ ಸರ್ಕಲ್ ಕಡೆ ನಡೆದು ಹೋಗುತ್ತಿದ್ದಾಗ ಗುಂಡಿಯ ಮೇಲಿದ್ದ ಶೀಟ್ ಮೇಲೆ ಕಾಲಿಟ್ಟಿದ್ದಾರೆ. ಆದರೆ ಶೀಟ್ ತುಂಡಾಗಿ ಗುಂಡಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದ ನಗರ ಪಾಲಿಕೆ ಅಧಿಕಾರಿಗಳು ಮನಿಯಾರ್ ಅವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ವೈದ್ಯರು ಸಹ ಮನಿಯಾರ್ ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿದ್ದು, ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ಘಟನೆ ಕುರಿತು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT