ಸಾಹಿತಿ ಗಿರೀಶ್ ಕಾರ್ನಾಡ್ 
ರಾಜ್ಯ

ನಾನು ನಗರದ ನಕ್ಸಲ್ ಎಂದ ಗಿರೀಸ್ ಕಾರ್ನಾಡ್ ವಿರುದ್ಧ ಪ್ರಕರಣ ದಾಖಲು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ನಾನು ನಗರ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ನಾನು ನಗರ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. 
ಹೈಕೋರ್ಟ್ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಎನ್'ಪಿ ಅಮೃತೇಶ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೃತೇಶ್ ಅವರು, ಕಾರ್ನಾಡ್ ವಿರುದ್ಧ ದೂರು ದಾಖಲಿಸಿದ್ದೇನೆ. ಪೊಲೀಸರು ನಕ್ಸಲ್ ಸಂಪರ್ಕ ಕುರಿತಂತೆ ಕಾರ್ನಾಡ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಹೇಳಿದ್ದಾರೆ. 
ದೂರು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾರ್ನಾಡ್ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜೀವಿಸುತ್ತಿದ್ದೇವೆ. ದೂರು ದಾಖಲು ಮಾಡುವ ಹಕ್ಕು ನನಗಿದೆ. ಏನನ್ನು ಹೇಳಬೇಕು, ಏನನ್ನು ಮಾಡಬೇಕೆಂಬ ಹಕ್ಕು ನನಗಿದೆ. ಕಾನೂನು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT