ಸಾಹಿತಿ ಗಿರೀಶ್ ಕಾರ್ನಾಡ್ 
ರಾಜ್ಯ

ನಾನು ನಗರದ ನಕ್ಸಲ್ ಎಂದ ಗಿರೀಸ್ ಕಾರ್ನಾಡ್ ವಿರುದ್ಧ ಪ್ರಕರಣ ದಾಖಲು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ನಾನು ನಗರ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ನಾನು ನಗರ ನಕ್ಸಲ್ ಎಂದು ಬೋರ್ಡ್ ಹಾಕಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. 
ಹೈಕೋರ್ಟ್ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಎನ್'ಪಿ ಅಮೃತೇಶ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೃತೇಶ್ ಅವರು, ಕಾರ್ನಾಡ್ ವಿರುದ್ಧ ದೂರು ದಾಖಲಿಸಿದ್ದೇನೆ. ಪೊಲೀಸರು ನಕ್ಸಲ್ ಸಂಪರ್ಕ ಕುರಿತಂತೆ ಕಾರ್ನಾಡ್ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಹೇಳಿದ್ದಾರೆ. 
ದೂರು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾರ್ನಾಡ್ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜೀವಿಸುತ್ತಿದ್ದೇವೆ. ದೂರು ದಾಖಲು ಮಾಡುವ ಹಕ್ಕು ನನಗಿದೆ. ಏನನ್ನು ಹೇಳಬೇಕು, ಏನನ್ನು ಮಾಡಬೇಕೆಂಬ ಹಕ್ಕು ನನಗಿದೆ. ಕಾನೂನು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT