ಜಿ.ಟಿ ದೇವೇಗೌಡ 
ರಾಜ್ಯ

ಭಾಷಾ ತೊಡಕು: ಕೇಂದ್ರ ಸಚಿವರ ವಿಡಿಯೋ ಕಾನ್ಫರೆನ್ಸ್ ಸ್ಕಿಪ್ ಮಾಡಿದ ಜಿ.ಟಿ ದೇವೇಗೌಡ

ಇಂಗ್ಲೀಷ್ ಭಾಷೆಯ ತೊಡಕಿನಿಂದಾಗಿ ಉನ್ನತ ಶಿಕ್ಷಣ ಸಚಿವ ಜಿ,ಟಿ ದೇವೇಗೌಡ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಜೊತೆಗಿನ ...

ಬೆಂಗಳೂರು: ಇಂಗ್ಲೀಷ್ ಭಾಷೆಯ ತೊಡಕಿನಿಂದಾಗಿ ಉನ್ನತ ಶಿಕ್ಷಣ ಸಚಿವ ಜಿ,ಟಿ ದೇವೇಗೌಡ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಜೊತೆಗಿನ ವಿಡಿಯೋ ಸಂವಾದ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.
ವಿಡಿಯೋ ಸಂವಾದದಲ್ಲಿ ಭಾಗವಹಿಸುವ  ಮಾಹಿತಿಯನ್ನು ಎಲ್ಲ ಮಾಧ್ಯಮಗಳಿಗೂ ಉನ್ನತ ಶಿಕ್ಷಣ ಸಚಿವರ ಕಚೇರಿಯಿಂದ ಕಳುಹಿಸಲಾಗಿತ್ತು.  ವಿಕಾಸಸೌಧದ 118ರಲ್ಲಿ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು.
ಕರ್ನಾಟಕ ಸೇರಿ ಪ್ರಮುಖ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಜೊತೆ ವಿಡಿಯೋ ಸಂವಾದ ನಿಗದಿ ಆಗಿತ್ತು, ಅಕ್ಟೋಬರ್ 2 ಕ್ಕೆ ನಡೆಯಲಿರುವ ಮಹಾತ್ಮಗಾಂಧಿಯವರ 150ನೇ ಜನ್ಮ ದಿನಾಚರಣೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನಿಗದಿಯಾಗಿತ್ತು.
ಆರಂಭದಲ್ಲಿ ವಿಡಿಯೋ ಸಂವಾದದಲ್ಲಿ ಭಾಗವಹಿಸಲು ಜಿ.ಟಿ ದೇವೇಗೌಡ ಒಪ್ಪಿದ್ದರು. ಆದರೆ ಸಚಿವರ ಆಪ್ತರೊಬ್ಬರು ಇಂಗ್ಲೀಷ್ ಸಮಸ್ಯೆ ಇರುವುದರಿಂದ ಬೇಡ ಎಂದು ಸಲಹೆ ನೀಡಿದ್ದರು. ಇದರಿಂದ ತಮ್ಮ ನಿರ್ಧಾರವನ್ನು ಬದಲಿಸಿದರು ಎಂದು ಮೂಲಗಳು ತಿಳಿಸಿವೆ.
ಇದೇ ಮೊದಲಲ್ಲಿ, ಈ ಹಿಂದೆಯೂ ಕೂಡ ವಿದೇಶಿ ವಿವಿ ನಿಯೋಗ ಅವರನ್ನು ಭೇಟಿ ಮಾಡಲು ಬಂದಾಗ ಇದೇ ರೀತಿಯಾಗಿತ್ತು, ಆ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟ್ರೊಲ್ ಗೊಳಗಾಗಿತ್ತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯ, ಜಿಟಿ ದೇವೇಗೌಡ ಅವರ ಆತ್ನ ವಿಶ್ವಾಸದಿಂದ ಸಂಹವನ ನಡೆಸಬೇಕುಸ ಒಂದು ವೇಳೆ ಕೇಂದ್ರ ಸಚಿವರು ಅರ್ಥಮಾಡಿಕೊಳ್ಳ ಬೇಕೆಂದರೇ ಅವರಿಗೆ ಭಾಷಾಂತರ ಮಾಡಿಕೊಳ್ಳುತ್ತಿದ್ದರು. ಈ ಸಂಬಂಧ ಹಲವು ಕಾಲ್, ಮೆಸೇಜ್ ಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT