ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಸಚಿವರ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿದೇಶ ಪ್ರಯಾಣ ಬೆಳಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಸೆ.11ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಪರಮೇಶ್ವರ್ ಅವರು ಪ್ರಯಾಣ ಬೆಳೆಸಲಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸೆ.10 ರಿಂದ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಕ್ಕಾಗಿ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದೇನೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ. ವಿಶ್ವರ ಇದರೆ ದೇಶದ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅದೇ ರೀತಿ ನನಗೂ ಆಹ್ವಾನ ಬಂದಿದೆ. ಹೀಗಾಗಿ ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಬೇಕಿಲ್ಲ ಎಂದು ಹೇಳಿದರು.
ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸಕ್ಕೆ ಸೆರಳಿದ್ದು ಸೆ.15ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಜೊತೆಗೆ ಸಚಿವಾರದ ಆರ್.ವಿ.ದೇಶಪಾಂಡೆ, ಶಿವಶಂಕರರೆಡ್ಡಿಯವರೂ ವಿದೇಶ ಪ್ರವಾಸದಲ್ಲಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos