ಉಪ ಮುಖ್ಯಮಂತ್ರಿ ಪರಮೇಶ್ವರ್ 
ರಾಜ್ಯ

ಸಿದ್ದರಾಮಯ್ಯ ಬಳಿಕ ಉಪ ಮುಖ್ಯಮಂತ್ರಿ ಪರಮೇಶ್ವರ್ ವಿದೇಶ ಪ್ರವಾಸ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಸಚಿವರ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿದೇಶ ಪ್ರಯಾಣ ಬೆಳಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಸಚಿವರ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿದೇಶ ಪ್ರಯಾಣ ಬೆಳಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಸೆ.11ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಪರಮೇಶ್ವರ್ ಅವರು ಪ್ರಯಾಣ ಬೆಳೆಸಲಿದ್ದಾರೆ. 
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸೆ.10 ರಿಂದ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಕ್ಕಾಗಿ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದೇನೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ. ವಿಶ್ವರ ಇದರೆ ದೇಶದ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅದೇ ರೀತಿ ನನಗೂ ಆಹ್ವಾನ ಬಂದಿದೆ. ಹೀಗಾಗಿ ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಬೇಕಿಲ್ಲ ಎಂದು ಹೇಳಿದರು. 
ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸಕ್ಕೆ ಸೆರಳಿದ್ದು ಸೆ.15ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಜೊತೆಗೆ ಸಚಿವಾರದ ಆರ್.ವಿ.ದೇಶಪಾಂಡೆ, ಶಿವಶಂಕರರೆಡ್ಡಿಯವರೂ ವಿದೇಶ ಪ್ರವಾಸದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ