ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ವಲಸಿಗರು, ವಿದೇಶಿಯರಿಗೆ ಬ್ರೇಕ್ ಹಾಕಲು ಸರ್ಕಾರ ಬಂಧನ ಕೇಂದ್ರ ಸ್ಥಾಪನೆ

ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ...

ಬೆಂಗಳೂರು: ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಅಂತವರನ್ನು ಗುರುತಿಸಿ ಬಂಧಿಸಲು ಮುಂದಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನ ನೆಲಮಂಗಲ ಸಮೀಪ ಬಂಧನ ಕೇಂದ್ರದಲ್ಲಿಡಲು ಸಿದ್ದತೆಗಳಾಗುತ್ತಿದ್ದು ಮುಂದಿನ ವರ್ಷ ಜಾರಿಗೆ ಬರಲಿದೆ.

ಕೇಂದ್ರ ಗೃಹ ಸಚಿವಾಲಯ ಕಳುಹಿಸಿದ ಪತ್ರದ ಆಧಾರದ ಮೇಲೆ ರಾಜ್ಯ ಸರ್ಕಾರ ಬಂಧನ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ. ಈ ಪತ್ರಕ್ಕೆ ಗೃಹ ಇಲಾಖೆ ವ್ಯವಹಾರಗಳ ಕೇಂದ್ರ ಸಚಿವಾಲಯದ ಅಧೀನ ಕಾರ್ಯದರ್ಶಿ ಪಿ ಸಿ ಗೈಟ್ ಸಹಿ ಮಾಡಿದ್ದಾರೆ.

ವೀಸಾ ಅವಧಿ ಮುಗಿದರೂ ಕೂಡ ಭಾರತದ ಪ್ರಮುಖ ನಗರಗಳಲ್ಲಿ ನೆಲೆಯನ್ನು ಮುಂದುವರಿಸುವ ವಿದೇಶಿಗರು ಮತ್ತು ಅಕ್ರಮವಾಗಿ ನೆಲೆಸುವ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಇತ್ತೀಚೆಗೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಬೆಂಗಳೂರು ಸಮೀಪ ನೆಲಮಂಗಲದಲ್ಲಿ ಬಂಧನ ಕೇಂದ್ರ ಸದ್ಯದಲ್ಲಿಯೇ ಸ್ಥಾಪನೆಯಾಗಲಿದೆ. ನಮಗೆ ಕೇಂದ್ರ ಸರ್ಕಾರದಿಂದ ಪತ್ರ ಬಂದಿದ್ದು ಸದ್ಯದಲ್ಲಿಯೇ ಕೇಂದ್ರ ಕಾರ್ಯರೂಪಕ್ಕೆ ಬರಲಿದೆ ಎಂದು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ತಿಳಿಸಿದ್ದಾರೆ.

ಆಫ್ರಿಕಾ ಮತ್ತು ಬಾಂಗ್ಲಾದೇಶದಿಂದ ಹಲವು ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಹಲವು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಪತ್ತೆಯಾಗಿದೆ.

ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನ್ನು ನೆಲಮಂಗಲದ ಆವರಣವನ್ನು ಬಂಧನ ಕೇಂದ್ರವನ್ನಾಗಿ ತೆರೆಯಲು ನಿರ್ಧರಿಸಿದೆ. ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ಇಲಾಖೆಯ ಎಡಿಜಿಪಿ ಕಮಲ್ ಪಂತ್, ಕಟ್ಟಡದ ಪುನರ್ ನವೀಕರಣ ಸದ್ಯದಲ್ಲಿಯೇ ಆರಂಭವಾಗಲಿದೆ. ಇದಕ್ಕಾಗಿ ಕಾರ್ಯವಿಧಾನವನ್ನು ರೂಪಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT