ಸಾಂದರ್ಭಿಕ ಚಿತ್ರ 
ರಾಜ್ಯ

ಭಾರತ ಬಂದ್: ಸಾರಿಗೆ ಸಂಚಾರ ಸ್ಥಗಿತ, ಸಾಮಾನ್ಯ ಜೀವನ ಅಸ್ತವ್ಯಸ್ತ

ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ...

ಬೆಂಗಳೂರು :  ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ಕೆಲ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟು ಕೂಡ ಮುಚ್ಚಿವೆ.

ಬಂದ್ ನಿಂದ ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆ, ಆ್ಯಪ್ ಆಧಾರಿತ ಟ್ಯಾಕ್ಸಿ , ಏರ್ ಪೋರ್ಟ್ ಟ್ಯಾಕ್ಸಿ, ಆಟೋ ಸೇವೆ ಸೇರಿದಂತೆ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಿದೆ.  ಜನರಿಗೆ ಅಗತ್ಯ ಸೇವೆಗಳಾದ ಹಣ್ಣು, ತರಕಾರಿ, ಹಾಲು, ಔಷಧಿ, ಆಸ್ಪತ್ರೆ ಸೇವೆಗಳು ಎಂದಿನಂತೆ ತೆರೆದಿವೆ. ಇನ್ನು ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಆಟೋ, ಮೊಬೈಲ್ ಆಧಾರಿತ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರು ಪ್ರಯಾಣಿಕರಿಂದ ಮನಸೋ ಇಚ್ಛೆ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಇಂದಿನ ಬಂದ್ ಗೆ ರಾಜ್ಯ ಸಮ್ಮಿಶ್ರ ಸರ್ಕಾರದ ಎರಡೂ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಬಂದ್ ತೀವ್ರವಾಗುವ ಸಾಧ್ಯತೆ ಇದೆ. ಉಭಯ ಪಕ್ಷಗಳ ಕಾರ್ಯಕರ್ತರು ರಾಜ್ಯಾದ್ಯಂತ ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಸಲಿದ್ದಾರೆ.

ಬಂದ್ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರತ್ ಬಂದ್’ ಸಂದರ್ಭದಲ್ಲಿ ಗುಂಪು ಘರ್ಷಣೆ, ಗಲಭೆ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಯಿರುವುದರಿಂದ  ರಾಜ್ಯವ್ಯಾಪಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 15 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಕಮಲ್ ಪಂತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT