ಸಂಗ್ರಹ ಚಿತ್ರ 
ರಾಜ್ಯ

ಹಂದಿಗಳ ವಿರುದ್ಧದ ಕಾರ್ಯಾಚರಣೆ ಅಂತ್ಯ: ಶಿವಮೊಗ್ಗದಿಂದ ಮದುರೈಗೆ ರವಾನೆ

ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ...

ಶಿವಮೊಗ್ಗ: ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ. 
ಸ್ಥಳೀಯ ನಿವಾಸಿಗಳಿಗೆ ನೀಡಿದ್ದ ಭರವಸೆಯಂತೆಯೇ ಕಳೆದ 6 ತಿಂಗಳಿಂದ ನಗರ ಪಾಲಿಕೆ ಅಧಿಕಾರಿಗಳು ಹಂದಿಗಳ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದ್ದರು. 
ಇದರಂತೆ ಪೊಲೀಸರ ರಕ್ಷಣೆ ಅಡಿಯಲ್ಲಿ ತಂಡಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸಿದರು. ಸೋಮವಾರ ಮಧ್ಯಾಹ್ನದವರೆಗೂ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳು 250 ಹಂದಿಗಳನ್ನು ಸೆರೆ ಹಿಡಿದರು. ಇವುಗಳಲ್ಲಿ ಸಾಕಷ್ಟು ಹಂದಿಗಳನ್ನು ಕೆಎಸ್ಆರ್'ಟಿಸಿ ಬಸ್ ನಿಲ್ದಾಣ ಹಾಗೂ ನಗರ ರೈಲ್ವೇ ನಿಲ್ದಾಣಗಳಲ್ಲಿ ಹೆಚ್ಚು ಸೆರೆ ಹಿಡಿಯಲಾಗಿದೆ. 
ಶಿವಮೊಗ್ಗ ನಗರ ಪಾಲಿಕೆಯ ಪಶು ವೈದ್ಯೆ ರೇಖಾ ಅವರು ಮಾತನಾಡಿ, ಹಂದಿಗಳ ಸಾಕಾಣೆಗಾರರಿಂದ ಯಾವುದಾದರೂ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾರ್ಯಾಚರಣೆ ವೇಳೆ ಪೊಲೀಸರ ಸಹಾಯವನ್ನು ಕೇಳಲಾಗಿತ್ತು. ಕಾರ್ಯಾಚರಣೆ ವೇಳೆ ಹಣಗಳನ್ನು ತೆಗೆದುಕೊಳ್ಳಲಾಗಿಲ್ಲ. ಹಂದಿಗಳನ್ನು ಹಿಡಿಯಲಿ ಪಾಲಿಕೆ ಯಾವುದೇ ಹಣವನ್ನೂ ಪಡೆದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?