ಸಂಗ್ರಹ ಚಿತ್ರ 
ರಾಜ್ಯ

ಹಂದಿಗಳ ವಿರುದ್ಧದ ಕಾರ್ಯಾಚರಣೆ ಅಂತ್ಯ: ಶಿವಮೊಗ್ಗದಿಂದ ಮದುರೈಗೆ ರವಾನೆ

ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ...

ಶಿವಮೊಗ್ಗ: ಶಿವಮೊಗ್ಗ ನಗರ ಪಾಲಿಕೆ ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 250 ಹಂದಿಗಳನ್ನು ಸೆರೆ ಹಿಡಿದಿದ್ದು, ಸೆರೆಹಿಡಿದ ಹಂದಿಗಳನ್ನು ತಮಿಳುನಾಡಿನ ಮದುರೈಗೆ ಸೋಮವಾರ ಸ್ಥಳಾಂತರಿಸಿದ್ದಾರೆ. 
ಸ್ಥಳೀಯ ನಿವಾಸಿಗಳಿಗೆ ನೀಡಿದ್ದ ಭರವಸೆಯಂತೆಯೇ ಕಳೆದ 6 ತಿಂಗಳಿಂದ ನಗರ ಪಾಲಿಕೆ ಅಧಿಕಾರಿಗಳು ಹಂದಿಗಳ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದ್ದರು. 
ಇದರಂತೆ ಪೊಲೀಸರ ರಕ್ಷಣೆ ಅಡಿಯಲ್ಲಿ ತಂಡಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸಿದರು. ಸೋಮವಾರ ಮಧ್ಯಾಹ್ನದವರೆಗೂ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳು 250 ಹಂದಿಗಳನ್ನು ಸೆರೆ ಹಿಡಿದರು. ಇವುಗಳಲ್ಲಿ ಸಾಕಷ್ಟು ಹಂದಿಗಳನ್ನು ಕೆಎಸ್ಆರ್'ಟಿಸಿ ಬಸ್ ನಿಲ್ದಾಣ ಹಾಗೂ ನಗರ ರೈಲ್ವೇ ನಿಲ್ದಾಣಗಳಲ್ಲಿ ಹೆಚ್ಚು ಸೆರೆ ಹಿಡಿಯಲಾಗಿದೆ. 
ಶಿವಮೊಗ್ಗ ನಗರ ಪಾಲಿಕೆಯ ಪಶು ವೈದ್ಯೆ ರೇಖಾ ಅವರು ಮಾತನಾಡಿ, ಹಂದಿಗಳ ಸಾಕಾಣೆಗಾರರಿಂದ ಯಾವುದಾದರೂ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾರ್ಯಾಚರಣೆ ವೇಳೆ ಪೊಲೀಸರ ಸಹಾಯವನ್ನು ಕೇಳಲಾಗಿತ್ತು. ಕಾರ್ಯಾಚರಣೆ ವೇಳೆ ಹಣಗಳನ್ನು ತೆಗೆದುಕೊಳ್ಳಲಾಗಿಲ್ಲ. ಹಂದಿಗಳನ್ನು ಹಿಡಿಯಲಿ ಪಾಲಿಕೆ ಯಾವುದೇ ಹಣವನ್ನೂ ಪಡೆದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT