ಸಾಂದರ್ಭಿಕ ಚಿತ್ರ 
ರಾಜ್ಯ

ಶಿಕ್ಷಕಿಯಾಗಬೇಕೆಂಬ ಆಸೆ ಹೊತ್ತಿದ್ದ ಶಿವಮೊಗ್ಗ ವಿದ್ಯಾರ್ಥಿನಿ ಗೌಹಾಟಿ ಐಐಟಿಯಲ್ಲಿ ಆತ್ಮಹತ್ಯೆ

ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

ಗೌಹಾಟಿ: ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.
ಶಿವಮೊಗ್ಗ ಹೊಸನಗರ ಮೂಲದ ಎಸ್.ಸಿ. ನಾಗಶ್ರೀ(18) ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
"ತನಗೆ ಟೀಚರ್ ಆಗುವ ಹಂಬಲವಿತ್ತು, ಇಂಜಿನಿಯರಿಂಗ್ ಮಾಡಲು ಇಷ್ಟವಿರಲಿಲ್ಲ. ಪೋಷಕರು ಬಯಸುವಂತೆ ಬದುಕಲು ಸಾಧ್ಯವಾಗದೆ ಇರುವುದಕ್ಕಿಂತ ಸಾವು ಉತ್ತಮವಾಗಿದೆ" ನಾಗಶ್ರೀ ಆತ್ಮಹತ್ಯೆಗೆ ಮುನ್ನ ಬರೆದಿರುವ ಡೆತ್ ನೋಟ್ ನಲ್ಲಿ ಬರೆದಿದ್ದಾಗಿ ಪೋಲೀಸರು ಮಾಹಿತಿ ನೀಡಿದರು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಗೌಹಾಟಿಯ ಹಾಸ್ತೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ನೇಣು ಹಾಕಿಕೊಂಡಿರುವುದನ್ನು ಕಿಟಕಿ ಮೂಲಕ ಸೆಕ್ಯೂರಿಟಿ ಗಾರ್ಡ್ ಪತ್ತೆ ಮಾಡಿ ಪೋಲೀಸರಿಗೆ ತಿಳಿಸಿದ್ದರು.
ಅನಾರೋಗ್ಯದ ಕಾರಣ ಈ ದಿನ ತರಗತಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಹಪಾಠಿಗೆ ನಾಗರ್ಶೀ ಹೇಳಿದ್ದಾಗಿ ಸಹಪಾಠಿ ವಿವರಿಸಿದ್ದು ಆಕೆ ಮೊದಲ ಅವಧಿ ತರಗತಿಗಳು ಮುಗಿದಾಗ ಹಾಸ್ಟೆಲ್ ಗೆ ವಾಪಾಸಾಗಿದ್ದಾಳೆ. ಆಗ ನಾಗಶ್ರೀ ಕೊಠಡಿಯ ಬಾಗಿಲು ಹಾಕಿಕೊಂಡಿರುವುದು ಕಂಡು ಸೆಕ್ಯೂರಿಟಿಗಾರ್ಡ್ ಗೆ ವಿಚಾರ ತಿಳಿಸಿದ್ದಾಳೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ಹೊಸನಗರದಲ್ಲಿನ ನಾಗಶ್ರೀ ಪೋಷಕರಿಗೆ ವಿಒಚಾರ ತಲುಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT