ಸಾಂದರ್ಭಿಕ ಚಿತ್ರ 
ರಾಜ್ಯ

ಶಿಕ್ಷಕಿಯಾಗಬೇಕೆಂಬ ಆಸೆ ಹೊತ್ತಿದ್ದ ಶಿವಮೊಗ್ಗ ವಿದ್ಯಾರ್ಥಿನಿ ಗೌಹಾಟಿ ಐಐಟಿಯಲ್ಲಿ ಆತ್ಮಹತ್ಯೆ

ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

ಗೌಹಾಟಿ: ಅಸ್ಸಾಂ ಗೌಹಾಟಿಯ ಐಐಟಿಯಲ್ಲಿ ಮೊದಲ ವರ್ಷ ಬಿ.ಟೆಕ್ ಅದ್ಯಯನ ನಡೆಸಿದ್ದ ಶಿವಮೊಗ್ಗದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.
ಶಿವಮೊಗ್ಗ ಹೊಸನಗರ ಮೂಲದ ಎಸ್.ಸಿ. ನಾಗಶ್ರೀ(18) ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
"ತನಗೆ ಟೀಚರ್ ಆಗುವ ಹಂಬಲವಿತ್ತು, ಇಂಜಿನಿಯರಿಂಗ್ ಮಾಡಲು ಇಷ್ಟವಿರಲಿಲ್ಲ. ಪೋಷಕರು ಬಯಸುವಂತೆ ಬದುಕಲು ಸಾಧ್ಯವಾಗದೆ ಇರುವುದಕ್ಕಿಂತ ಸಾವು ಉತ್ತಮವಾಗಿದೆ" ನಾಗಶ್ರೀ ಆತ್ಮಹತ್ಯೆಗೆ ಮುನ್ನ ಬರೆದಿರುವ ಡೆತ್ ನೋಟ್ ನಲ್ಲಿ ಬರೆದಿದ್ದಾಗಿ ಪೋಲೀಸರು ಮಾಹಿತಿ ನೀಡಿದರು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ಗೌಹಾಟಿಯ ಹಾಸ್ತೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ನೇಣು ಹಾಕಿಕೊಂಡಿರುವುದನ್ನು ಕಿಟಕಿ ಮೂಲಕ ಸೆಕ್ಯೂರಿಟಿ ಗಾರ್ಡ್ ಪತ್ತೆ ಮಾಡಿ ಪೋಲೀಸರಿಗೆ ತಿಳಿಸಿದ್ದರು.
ಅನಾರೋಗ್ಯದ ಕಾರಣ ಈ ದಿನ ತರಗತಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಹಪಾಠಿಗೆ ನಾಗರ್ಶೀ ಹೇಳಿದ್ದಾಗಿ ಸಹಪಾಠಿ ವಿವರಿಸಿದ್ದು ಆಕೆ ಮೊದಲ ಅವಧಿ ತರಗತಿಗಳು ಮುಗಿದಾಗ ಹಾಸ್ಟೆಲ್ ಗೆ ವಾಪಾಸಾಗಿದ್ದಾಳೆ. ಆಗ ನಾಗಶ್ರೀ ಕೊಠಡಿಯ ಬಾಗಿಲು ಹಾಕಿಕೊಂಡಿರುವುದು ಕಂಡು ಸೆಕ್ಯೂರಿಟಿಗಾರ್ಡ್ ಗೆ ವಿಚಾರ ತಿಳಿಸಿದ್ದಾಳೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ಹೊಸನಗರದಲ್ಲಿನ ನಾಗಶ್ರೀ ಪೋಷಕರಿಗೆ ವಿಒಚಾರ ತಲುಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT