ಅಪಘಾತದಲ್ಲಿ ಮೃತಪಟ್ಟ ಸುರೇಖಾ ಮತ್ತು ಆರಾಧ್ಯ 
ರಾಜ್ಯ

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣ; ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ; ತಾಯಿ-ಮಗಳ ದಾರುಣ ಸಾವು

ಅಪರಿಚಿತ ವಾಹನ ಹರಿದು ತಾಯಿ-ಮಗಳು ಮೃತಪಟ್ಟಿರುವ ದಾರುಣ ಘಟನೆ ನಾಗವಾರ ರಿಂಗ್‌ ರಸ್ತೆಯಲ್ಲಿ ನಡೆದಿದೆ. .

ಬೆಂಗಳೂರು: ಅಪರಿಚಿತ ವಾಹನ ಹರಿದು ತಾಯಿ-ಮಗಳು ಮೃತಪಟ್ಟಿರುವ ದಾರುಣ ಘಟನೆ ನಾಗವಾರ ರಿಂಗ್‌ ರಸ್ತೆಯಲ್ಲಿ ನಡೆದಿದೆ. 
ಹೆಗ್ಗಡೆನಗರ ನಿವಾಸಿ ರಘು ಎಂಬುವವರ ಪತ್ನಿ ಸುರೇಖಾ (30) ಹಾಗೂ ಪುತ್ರಿ ಆರಾಧ್ಯ (3) ಮೃತರು. ಘಟನೆಯಲ್ಲಿ ರಘು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 
ಉಡುಪಿ ಜಿಲ್ಲೆ ಕುಂದಾಪುರ ಮೂಲದ ರಘು ದಂಪತಿ, ಗಂಗಾನಗರದ ಸಿಬಿಐ ಬಳಿ ಬೇಕರಿ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದ ಅವರು, ಬೇಕರಿ ಸಮೀಪದಲ್ಲೇ ಮನೆ ಮಾಡಿಕೊಂಡಿದ್ದರು. 
ಗುರುವಾರ ಸಂಜೆ ಬಳ್ಳಾರಿ ರಸ್ತೆ ಬ್ಯಾಟರಾಯನಪುರದಲ್ಲಿರುವ ಸ್ನೇಹಿತರ ಮನೆಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ವಾಪಸ್‌ ತಮ್ಮ ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದರು. ಹೆಬ್ಬಾಳ ಫ್ಲೈಓವರ್‌ ಬಳಿ ಗೊತ್ತಿಲ್ಲದೇ ಎಡಕ್ಕೆ ತಿರುಗಿಸಿಕೊಂಡು ಕೆ.ಆರ್‌. ಪುರದ ಕಡೆ ತೆರಳಿದ್ದರು. ಸ್ವಲ್ಪ ದೂರ ಮುಂದೆ ಹೋದ ಬಳಿಕ ದಾರಿ ತಪ್ಪಿರುವುದು ಗೊತ್ತಾಗಿ, ಸ್ಥಳೀಯರ ಬಳಿ ವಿಳಾಸ ಕೇಳಿದ್ದಾರೆ. ಅವರು ಯು ತಿರುವು ತೆಗೆದುಕೊಂಡು ವಾಪಸ್‌ ಹೆಬ್ಬಾಳ ಕಡೆ ತೆರಳುವಂತೆ ತಿಳಿಸಿದ್ದ ಕಾರಣ ನಾಗವಾರ ಬಳಿ ತಿರುವು ತೆಗೆದುಕೊಂಡು ಹೋಗುತ್ತಿದ್ದರು. ಲುಂಬಿನಿ ಗಾರ್ಡನ್‌ ಬಳಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ರಘು ಸ್ಕೂಟರ್‌ಗೆ ತಾಗಿ ವೇಗವಾಗಿ ಮುಂದಕ್ಕೆ ಸಾಗಿದೆ. ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್‌ ಸಮೇತ ಮೂವರು ರಸ್ತೆಗೆ ಬಿದ್ದಿದ್ದಾರೆ. 
ಡಿಕ್ಕಿ ಹೊಡೆದಿರುವ ಅಪರಿಚಿತ ವಾಹನದ ಪತ್ತೆಗೆ ರಸ್ತೆಯಲ್ಲಿರುವ ಸಿಗ್ನಲ್‌ಗಳ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಅಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾ ಇಲ್ಲ ಎಂದು ಹೇಳಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರನೊಬ್ಬ ತಮ್ಮ ಗಾಡಿ ನಿಲ್ಲಿಸಿರಘು ಪೂಜಾರ್ ಅವರಿಗೆ ಸಹಾಯ ಮಾಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT