ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು:ವೇಗವಾಗಿ ಬಂದ ಶಾಲಾ ಬಸ್ ಬೈಕ್ ಗೆ ಡಿಕ್ಕಿ:ಇಬ್ಬರು ಸಾವು

ವೇಗವಾಗಿ ಬಂದ ಶಾಲಾ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅತ್ತಿಬೆಲೆ ವೃತ್ತದ ಬಳಿಯ ಬಿದರಕಲ್ಲಿನ ಬಳಿ ನಡೆದಿದೆ.

ಬೆಂಗಳೂರು: ವೇಗವಾಗಿ ಬಂದ ಶಾಲಾ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅತ್ತಿಬೆಲೆ ವೃತ್ತದ ಬಳಿಯ ಬಿದರಕಲ್ಲಿನ ಬಳಿ ನಡೆದಿದೆ.

ಮೃತರನ್ನು ಮಂಜುನಾಥ್ (40)  ಹಾಗೂ ಆತನ ಸ್ನೇಹಿತ ಶ್ರೀನಾಥ್ (24) ಎಂದು ಗುರುತಿಸಲಾಗಿದೆ. ಇವರಿಬ್ಬರೂ  ತಮಿಳುನಾಡಿನ ಟಿ. ಹೊಸಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಅನೇಕಲ್ ನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕಚೇರಿಗೆ ಬರಲು ಅನೇಕಲ್ ಕಡೆಗೆ ಬರುತ್ತಿದ್ದಾಗ ನಿನ್ನೆ ಬೆಳಿಗ್ಗೆ 7-30ರ ಸುಮಾರಿನಲ್ಲಿ ಅಪಘಾತ ನಡೆದಿದೆ ವೇಗವಾಗಿ ಬಂದ ನಾರಾಯಣ ಶಾಲೆಯ ಬಸ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಆ ಬಸ್ ನಲ್ಲಿ ಮಕ್ಕಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣವಾಗಿದೆ.  ಅಪಘಾತದ ನಂತರ ಬಸ್ ಚಾಲಕ ತಲೆಮರೆಸಿಕೊಂಡಿದ್ದಾನೆ.  ಪೊಲೀಸರು ಆತನ ಹುಡುಕಾಟ ನಡೆಸುತ್ತಿದ್ದಾರೆ. ಬಸ್ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT