ಅಂತರಾಷ್ಟ್ರೀಯ ಕ್ರೀಡಾಪಟು ಸುಲತಾ ಕಾಮತ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ 
ರಾಜ್ಯ

ಅಂತರಾಷ್ಟ್ರೀಯ ಕ್ರೀಡಾಪಟು ಸುಲತಾ ಕಾಮತ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಅಂತರಾಷ್ಟ್ರೀಯ ಮಟ್ಟದ ಹಲವಾರು ಕ್ರೀಡೆಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದು ದೇಶಕ್ಕೆ ಗೌರವ ತಂದುಕೊಟ್ಟ ಸುಲತಾ ಕಾಮತ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಭಾನುವಾರ ನಡೆದಿದೆ...

ಉಡುಪಿ: ಅಂತರಾಷ್ಟ್ರೀಯ ಮಟ್ಟದ ಹಲವಾರು ಕ್ರೀಡೆಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದು ದೇಶಕ್ಕೆ ಗೌರವ ತಂದುಕೊಟ್ಟ ಸುಲತಾ ಕಾಮತ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಭಾನುವಾರ ನಡೆದಿದೆ. 
ಕಟಪಾಡಿಯ ಎನ್.ಹೆಚ್ 66 ರ ಸಮೀಪ ಸುಲತಾ ಅವರು ಟೀ ಅಂಗಡಿಯನ್ನು ನಡೆಸುತ್ತಿದ್ದು, ನಿನ್ನೆ ಬೆಳಗಿನ ಜಾವ 3.30ರ ಸುಮಾರಿಗೆ ಬಂದಿರುವ ದುಷ್ಕರ್ಮಿಗಳು ಆಮ್ಲೆಟ್ ಮಾಡಿಕೊಂಡುವಂತೆ ತಿಳಿಸಿದ್ದಾರೆ. ಈ ವೇಳೆ ಆಗುವುದಿಲ್ಲ ಎಂದು ತಿಳಿಸಿದಾಗ ಮೀನುಗಾರನಾಗಿರುವ ಆರೋಪಿ ಚರಣ್ ಕುಂದರ್ ಎಂಬಾತ ಕಲ್ಲಿನಿಂದ ಸುಲತಾ ಅವರ ಮುಖದ ಮೇಲೆ ಹೊಡೆದಿದ್ದಾರೆ. ಬಲಿಕ ಮತ್ತೊಬ್ಬ ಆರೋಪಿ ದೀಕ್ಷಿತ್ ಎಂಬಾತ ಕೈಯಿಂದ ಹಲ್ಲೆ ನಡೆಸಿದ್ದಾನೆ. ಇಬ್ಬರೂ ಆರೋಪಿಗಳು ಅಂಗಡಿಗೆ ಪ್ರತೀನಿತ್ಯ ಬರುತ್ತಿದ್ದ ಗ್ರಾಹಕರಾಗಿದ್ದು, ಒಬ್ಬ ರೌಡಿ ಎಂದು ಸುಲತಾ ಅವರು ಹೇಳಿದ್ದಾರೆ. 
ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರವ ಸುಲತಾ ಅವರ ಪತಿ, ಪುತ್ರ ಹಾಗೂ ಪುತ್ರಿ ಘಟನೆಗೆ ಸಂಬಂಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಸುಲತಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದೂ ಅಲ್ಲದೆ, ಕುಟುಂಬದವರಿಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಸುಲತಾ ಅವರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT