ರಾಜ್ಯ

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ನೇಣಿಗೆ ಶರಣು!

Raghavendra Adiga
ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ  ನವಜೋಡಿಯೊಂದು ಡೆತ್ ನೊಟ್ ಬರೆದಿಟ್ಟು ಒಂದೇ ನೇಣು ಕುಣಿಕೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯದ ಮಳವಳ್ಳಿ ಸಮೀಪ ಅಂಚೆದೊಡ್ಡಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಅಶ್ವಿನಿ(21), ನವೀನ್(25) ಎನ್ನುವ ದಂಪತಿಗಳು ಸಾವಿಗೆ ಶರಣಾಗಿದ್ದಾರೆ.
ಮೂಲತಃ ಮಂಡ್ಯದ ಹೆಬ್ಬಕವಾಡಿ ಗ್ರಾಮದವರಾಗಿದ್ದ ಈ ಇಬ್ಬರೂ ಕಳೆದ ಇಪ್ಪತ್ತು ದಿನಗಳ ಹಿಂದಷ್ಟೇ ವಿವಾಹವಾಗಿದರು.ಮೂರು ದಿನಗಳ ಹಿಂದೆ ತಮ್ಮ ಸ್ವಗ್ರಾಮದಿಂದ ಅಜ್ಜಿ ಮನೆ ಇದ್ದ ಅಂಚೆದೊಡ್ಡಿ ಗ್ರಾಮಕ್ಕೆ ಬಂದಿದ್ದ ಈ ಜೋಡಿ ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದೆ.
ಸಾವಿಗೆ ಮುನ್ನ ಬರೆದ ಡೆತ್ ನೊಟ್ ನಲ್ಲಿ "ನಮ್ಮ ಸಾವಿಗೆ ಯಾರೂ ಕಾರಣವಲ್ಲ, ನಮ್ಮ ಆಸೆಯಂತೆಯೇ ನಾವು ಸಾವನ್ನಪ್ಪುತ್ತಿದ್ದೇವೆ." ಎಂದು ಬರೆಯಲಾಗಿದೆ.
ದಂಪತಿಗಳ ಸಾವಿಗೆ ನಿಖರ ಕಾರಣ ತಿಳಿದಿಲ್ಲ.ಘಟನೆ ಕುರಿತಂತೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
SCROLL FOR NEXT