ಸಾಂದರ್ಭಿಕ ಚಿತ್ರ 
ರಾಜ್ಯ

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ದುರಸ್ತಿ: ಮಂಗಳೂರು ರೈಲು ಅಕ್ಟೋಬರ್ ವರೆಗೆ ರದ್ದು

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವುದರಿಂದ ...

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್ 29ರವರೆಗೆ ಬೆಂಗಳೂರು-ಮಂಗಳೂರು ಮಧ್ಯೆ ರೈಲ್ವೆ ಸಂಚಾರ ಭಾಗಶಃ ಹಲವು ದಿನಗಳಂದು ರದ್ದಾಗಲಿದೆ.

ಕೆಂಪೇಗೌಡ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ -ಕಣ್ಣೂರು/ಕಾರವಾರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16511/16513 ರೈಲು ಅಕ್ಟೋಬರ್ 28ರವರೆಗೆ, ಕೆಎಸ್ಆರ್ ಬೆಂಗಳೂರು-ಕಣ್ಣೂರು/ಕಾರವಾರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16517/ 16523 ಅಕ್ಟೋಬರ್ 25ರವರೆಗೆ, ಕಣ್ಣೂರು/ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಖ್ಯೆ 16512/16524 ಅಕ್ಟೋಬರ್ 29ರವರೆಗೆ ಸಂಚಾರ ರದ್ದಾಗಲಿದೆ.

ಜನ್ಸಧರನ್ ವಿಶೇಷ ರೈಲು ಸಂಖ್ಯೆ 06515 ಯಶವಂತಪುರದಿಂದ ಹಾಸನದವರೆಗೆ ಅಕ್ಟೋಬರ್ 22 ಮತ್ತು 29ರಂದು, ಜನ್ಸಧರನ್ ವಿಶೇಷ ರೈಲು ಸಂಖ್ಯೆ 06576 ಹಾಸನದಿಂದ ಯಶವಂತಪುರದವರೆಗೆ ಅಕ್ಟೋಬರ್ 23ರಂದು ಸಂಚರಿಸಲಿದೆ.
ಮೈಸೂರು ವಿಭಾಗಗದಲ್ಲಿ ಸಸಲು ಎಂಬಲ್ಲಿ ಹಳಿಯ ಅಗಲು ಹೆಚ್ಚಳ ಮಾಡುವ ಕೆಲಸ ನಡೆಯುತ್ತಿರುವುದರಿಂದ ಕೆಲವು ರೈಲುಗಳು ಭಾಗಶಃ ರದ್ದಾಗಲಿವೆ.

ಜೋಧುಪುರ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಖ್ಯೆ 16507, 56274 ಹುಬ್ಬಳ್ಳಿ-ಅರಸೀಕೆರೆ ಪ್ಯಾಸೆಂಜರ್ ರೈಲು ಸಂಖ್ಯೆ 56274 ಮತ್ತು ಚಿತ್ರದುರ್ಗ-ಹರಿಹರ ಪ್ಯಾಸೆಂಜರ್ ರೈಲು ಸಂಖ್ಯೆ 56517 ಅಕ್ಟೋಬರ್ 28ರಂದು 25 ನಿಮಿಷಗಳ ಕಾಲ ವಿಳಂಬವಾಗಲಿದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಅಧಿಕಾರಿ ಇ ವಿಜಯ, ಸಕಲೇಶಪುರದವರೆಗೆ ಪ್ರಯಾಣಿಕರು ರೈಲಿನಲ್ಲಿ ಹೋಗಲು ಯಾವುದೇ ಅಡ್ಡಿಯಿಲ್ಲ, ಅಲ್ಲಿಯವರೆಗೆ ರೈಲಿನಲ್ಲಿ ಸಂಚರಿಸಿ ಅಲ್ಲಿಂದ ಪ್ರಯಾಣಿಕರು ಬೇರೆ ಸಂಚಾರ ವಾಹನಗಳನ್ನು ಬಳಸಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT