ಕರ್ನಾಟಕ ಸರ್ಕಾರದ ವಶಕ್ಕೆ ಗೋಕರ್ಣ ದೇವಾಲಯ 
ರಾಜ್ಯ

ಕರ್ನಾಟಕ ಸರ್ಕಾರದ ವಶಕ್ಕೆ ಗೋಕರ್ಣ ದೇವಾಲಯ

ಹೈಕೋರ್ಟ್ ಆದೇಶದ ಅನುಸಾರ ಉತ್ತರ ಕನ್ನಡ ಜಿಲ್ಲಾಡಳಿತ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ವಶಕ್ಕೆ ಪಡೆದಿದೆ. ಕಳೆದ 10 ವರ್ಷಗಳಿಂದ ದೇವಾಲಯ ಶ್ರೀರಾಮಚಂದ್ರಾಪುರ ಮಠದ ವಶದಲ್ಲಿತ್ತು.

ಕಾರ್ವಾರ: ಹೈಕೋರ್ಟ್ ಆದೇಶದ ಅನುಸಾರ ಉತ್ತರ ಕನ್ನಡ ಜಿಲ್ಲಾಡಳಿತ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ವಶಕ್ಕೆ ಪಡೆದಿದೆ.  ಕಳೆದ 10 ವರ್ಷಗಳಿಂದ ದೇವಾಲಯ ಶ್ರೀರಾಮಚಂದ್ರಾಪುರ ಮಠದ ವಶದಲ್ಲಿತ್ತು. 
ಹಲವು ವರ್ಷಗಳ ಕಾಲ ದೇವಾಲಯವನ್ನು ಟ್ರಸ್ಟಿಗಳು ನಿರ್ವಹಣೆ ಮಾಡುತ್ತಿದ್ದರು. ಆದರೆ 2008 ರ ಆಗಸ್ಟ್ 12 ರಂದು ಯಡಿಯೂರಪ್ಪ ನೇತೃತ್ವದ ಸರ್ಕಾರ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ವಹಿಸುವ ನಿರ್ಧಾರ ಕೈಗೊಂಡಿತ್ತು. ಅಂದಿನಿಂದ 10 ವರ್ಷಗಳ ಕಾಲ ದೇವಾಲಯ ರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟಿತ್ತು. 
ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯದ ಆಡಳಿತವನ್ನು ನೀಡಿರುವುದನ್ನು ಪ್ರಶ್ನಿಸಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಧಾರ್ಮಿಕ ದತ್ತಿ ಇಲಾಖೆಗೆ ದೇವಾಲಯದ ಆಡಳಿತವನ್ನು ಹಸ್ತಾಂತರಿಸಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು. ಅಷ್ಟೇ ಅಲ್ಲದೇ ದೇವಾಲಯದ ಆಡಳಿತಕ್ಕಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದೂ ಕೋರ್ಟ್ ಸೂಚನೆ ನೀಡಿತ್ತು. 
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ಕೆಲವು ಗೊಂದಲಗಳಿದ್ದ ಕಾರಣ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ್ದರು.  ರಾಜ್ಯ  ಆಡಿಟರ್ ಜನರಲ್ ಅವರಿಂದ ಸ್ಪಷ್ಟನೆ ಪಡೆದ ಬಳಿಕ ಜಿಲ್ಲಾಧಿಕಾರಿಗಳಿಗೆ ಆಡಳಿತವನ್ನು ವಹಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಅಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT