ದುನಿಯಾ ವಿಜಯ್-ಕೀರ್ತಿಗೌಡ-ನಾಗರತ್ನ 
ರಾಜ್ಯ

ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಮೊದಲ ಪತ್ನಿಯಿಂದ 2ನೇ ಪತ್ನಿ ವಿರುದ್ಧ ದೂರು!

ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ...

ಬೆಂಗಳೂರು: ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ. 
ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಹಾಗೂ ಇಬ್ಬರು ಬೌನ್ಸರ್ ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿ ನಾಗರತ್ನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಕೀರ್ತಿ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 
ದುನಿಯಾ ವಿಜಯ್ ಬಂಧನದ ವೇಳೆ ಮಗ ಸಾಮ್ರಾಟ್ ವಿಜಯ್ ಜೊತೆ ಇದ್ದಿದ್ದರಿಂದ ನಾಗರತ್ನ ಅವರು ಮಗ ಬಗ್ಗೆ ವಿಚಾರಿಸಲು ಹೋದ ಸಂದರ್ಭದಲ್ಲಿ ಕೀರ್ತಿ ಗೌಡ ಹಾಗೂ ಇಬ್ಬರು ಬೌನ್ಸರ್ ಗಳು ಹಲ್ಲೆ ಮಾಡಿದ್ದಾರೆ ಎಂದು ನಾಗರತ್ನ ದೂರು ದಾಖಲಿಸಿದ್ದಾರೆ. 
ದುನಿಯಾ ವಿಜಯ್ ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಸಾಮ್ರಾಟ್ ಸಹ ಜೊತೆಯಲ್ಲಿದ್ದ ಆತನ ಮೇಲೆ ಸಹ ಹಲ್ಲೆಯಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರಗೊಂಡ ಹಿನ್ನೆಲೆಯಲ್ಲಿ ನೊಂದ ನಾಗರತ್ನ ಅವರು ಮಗನ ಯೋಗಕ್ಷೇಮ ವಿಚಾರಿಸಲು ಕೀರ್ತಿಗೌಡ ಮನೆಗೆ ಹೋಗಿದ್ದಾಗ ಹಲ್ಲೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT