ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ಒಯುನಲ್ಲಿ ಯುಜಿ, ಪಿಜಿ ಪ್ರವೇಶಕ್ಕೆ ವಯಸ್ಸು ಆಧರಿತ ಪ್ರವೇಶ ರದ್ದು

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದ ಪರಿಷ್ಕೃತ ...

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದ ಪರಿಷ್ಕೃತ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಮಾನದಂಡವಾಗಿರುತ್ತದೆಯೇ ಹೊರತು ವಯಸ್ಸು ಅಲ್ಲ ಎಂದು ಹೇಳಿದೆ.

ಈ ಹಿಂದೆ ಕೆಎಸ್ಒಯುದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಪ್ರವೇಶಕ್ಕೆ ವಯಸ್ಸು ಮುಖ್ಯ ಮಾನದಂಡವಾಗಿರುತ್ತಿತ್ತು. ಆದರೆ ಇನ್ನು ಮುಂದೆ ಪದವಿ ಕೋರ್ಸ್ ಗಳಿಗೆ 10+2 ತರಗತಿ ತೇರ್ಗಡೆ ಹೊಂದಿರುವ ಯಾವುದೇ ಅಭ್ಯರ್ಥಿಗಳು ಪದವಿಗೆ ಮತ್ತು ಮೂರು ವರ್ಷಗಳ ಪದವಿ ಗಳಿಸಿರುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಗೆ ಪ್ರವೇಶ ಗಿಟ್ಟಿಸಿಕೊಳ್ಳಬಹುದು.

2018-19ನೇ ಸಾಲಿನ ಯುಜಿ ಮತ್ತು ಪಿಜಿ ಕೋರ್ಸ್ ಗಳಿಗೆ ಕೆಎಸ್ಒಯು ಅರ್ಜಿಗಳನ್ನು ಆಹ್ವಾನಿಸಿದ್ದು ಅಧಿಸೂಚನೆಗೆ ಅಷ್ಟೊಂದು ಅರ್ಜಿಗಳು ಬಾರದಿರುವ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸುವಂತೆ ಕೆಎಸ್ಒಯು ಅಧಿಕಾರಿಗಳು ಯುಜಿಸಿಯಿಂದ ಅನುಮತಿ ಕೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಡಿ ಶಿವಲಿಂಗಯ್ಯ, ಈ ಹಿಂದೆ ಅಭ್ಯರ್ಥಿಗಳ ಪ್ರವೇಶ ವಯಸ್ಸನ್ನು ಆಧರಿಸಿ ಇರುತ್ತಿತ್ತು. ಇದೀಗ ಯುಜಿಸಿ ಪರಿಷ್ಕೃತ ನಿಯಮಗಳನ್ನು ಜಾರಿಗೆ ತಂದಿದೆ. ಬದಲಾದ ನಿಯಮಕ್ಕೆ ಅಷ್ಟೊಂದು ಅರ್ಜಿಗಳು ಬಂದಿಲ್ಲ, ಹೀಗಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT