ದರ್ಶನ್ 
ರಾಜ್ಯ

ಮೈಸೂರು: ಕಾರು ಅಪಘಾತದಲ್ಲಿ ನಟ ದರ್ಶನ್, ದೇವರಾಜ್, ಪ್ರಜ್ವಲ್ ಸೇರಿ ನಾಲ್ವರಿಗೆ ಗಾಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ನಸುಕಿನ ಜಾವ ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು ಅವರ ಕೈ ಮುರಿದಿದೆ ಎಂದು...

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ನಸುಕಿನ ಜಾವ ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು ಅವರ ಕೈ ಮುರಿದಿದೆ ಎಂದು ವರದಿಗಳು ತಿಳಿಸಿವೆ. ಅವರ ಜೊತೆ ಕನ್ನಡದ ಹಿರಿಯ ನಟರಾದ ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಮತ್ತೊಬ್ಬರು ಸಹ ಪ್ರಯಾಣಿಸುತ್ತಿದ್ದರು.

ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಅಪಘಾತ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೂವರಿಗೂ ಗಾಯವಾಗಿದ್ದು, ಮೈಸೂರು-ಬೆಂಗಳೂರು ಹೊರ ವರ್ತುಲ ರಸ್ತೆಯಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಸುದ್ದಿ ಕೇಳುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಜೆಎಸ್ಎಸ್ ಅರ್ಬನ್ ಹಟ್ ಜಂಕ್ಷನ್ ಹತ್ತಿರ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ದರ್ಶನ್​ ಅವರು ಒಡೆಯ ಚಿತ್ರದ ಶೂಟಿಂಗ್​ ಮುಗಿಸಿ ವಾಪಸ್​ ಬರುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ತನ್ನ ಬಲಗೈಗೆ ಗಾಯವಾಗಿ ಶಸ್ತ್ರಚಿಕಿತ್ಸೆಗೆ ನಟ ದರ್ಶನ್ ಒಳಗಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ಶಸ್ತ್ರಚಿಕಿತ್ಸೆ ಬಳಿಕ ವರ್ಗಾಯಿಸಲಾಗಿದೆ. ಉಳಿದ ಕಲಾವಿದರ ಸ್ಥಿತಿ ಕೂಡ ಸ್ಥಿರವಾಗಿದ್ದು, ಅಪಘಾತ ನಡೆಯುವ ವೇಳೆ ಕಾರನ್ನು ಯಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿಲ್ಲ.

ಅಪಘಾತದ ಬಗ್ಗೆ ಮತ್ತು ನಟರ ಪರಿಸ್ಥಿತಿ ಬಗ್ಗೆ ಅವರ ಕುಟುಂಬಸ್ಥರಾಗಲಿ, ಸ್ನೇಹಿತರಾಗಲಿ ಹೆಚ್ಚಿನ ವಿವರ ನೀಡುತ್ತಿಲ್ಲ. ಕಾರು ಅಪಘಾತವಾದ ಬಗ್ಗೆ ಇದುವರೆಗೆ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. ಅಪಘಾತ ನಡೆದ ಸ್ಥಳದಲ್ಲಿ ದರ್ಶನ್ ಅವರ ಕಾರು ಕೂಡ ನಾಪತ್ತೆಯಾಗಿದೆ.

ಮೈಸೂರಿನ ವಿ.ವಿ.ಪುರಂ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು ಇದೀಗ ಪೊಲೀಸರೇ ಆಸ್ಪತ್ರೆಗೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ದರ್ಶನ್ ಗೆ ಅಪಘಾತವಾಗಿರುವ ಬಗ್ಗೆ ಮಾಹಿತಿ ತಿಳಿದು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಗಮಿಸಿ ತೊಂದರೆಯಾಗುವ ಸಾಧ್ಯತೆಯಿರುವುದರಿಂದ ಅವರು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆ ಹೊರಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT