ಮಂಡ್ಯ: ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿಸಿ ಬಸ್ ಮನೆಯೊಂದಕ್ಕೆ ನುಗ್ಗಿದ ಕಾರಣ ವ್ಯಕ್ತಿಯು ಸಾವನ್ನಪ್ಪಿರುವ ಘ್ಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ ಸಂಬವಿಸಿದ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜಲಮಂಡಳಿ ನೌಕರನಾದ ಮಹದೇವು (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮನೆಯಲ್ಲಿದ್ದ ಸರ್ವಮಂಗಳಾ, ನಾಗರತ್ನ, ಬಸ್ ನಲ್ಲಿದ್ದ ಪ್ರಯಾಣಿಕರಾದ ಶ್ರುತಿ, ಮಹದೇವಮ್ಮ ಸಹ ಗಾಯಗೊಂಡಿದ್ದು ಅವರೆಲ್ಲರನ್ನೂ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಳ್ಳೇಗಾಲದಿಂದ ಬೆಂಗಳೂರಿಗೆ ಬರುತ್ತಿದ್ದ ಸಾರಿಗೆ ಬಸ್ ಮಳವಳ್ಳಿ ಮಾರ್ಗದಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳಿಕೆ ಗುದ್ದುವುದನ್ನು ತಪ್ಪಿಸಲು ಮುಂದಾದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದೆ ಬಳಿಕ ಬಸ್ ಮನೆಗೆ ನುಗ್ಗಿದೆ.
ಘಟನೆಯಲ್ಲಿ ವಿದ್ಯುತ್ ಕಂಬ ಮುರಿದಿದ್ದು ಮನೆ ಗೋಡೆಗಳು ಕುಸಿದಿದೆ.
ಮಳವಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.